ಕೊಡಗು ಸಂಪಾಜೆ ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ತಾಲೂಕು ಸ್ತ್ರೀ ಶಕ್ತಿ ಒಕ್ಕೂಟಗಳ ಸಹಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕಾರ್ಯಕ್ರಮ ಏರ್ಪಡಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯೊಂದಿಗೆ ಸಮಾರಂಭವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್ ಉದ್ಘಾಟನೆಯನ್ನು ಮಾಡಿದರು. ಮುಖ್ಯ ಅತಿಥಿಗಳಾಗಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಶೀಲಾ ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಇರ್ಷಾದ್, ಬಾಲ ಕಾರ್ಮಿಕ ಅಧಿಕಾರಿ ಶಿರಾಜ್ ಅಹಮ್ಮದ್, ಸ್ತ್ರೀ ಶಕ್ತಿ ತಾಲೋಕು ಒಕ್ಕೂಟದ ಅಧ್ಯಕ್ಷೆ ಪುಷ್ಪಾವತಿ, ತಾಲೂಕು ಸದಸ್ಯೆ ರೂಪಾ ರಮೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ ಮತ್ತು ಕುಮಾರ್ ಚೆದ್ಕಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಸಮಾರಂಭದಲ್ಲಿ ಅರಣ್ಯ ಶಾಸ್ತ್ರ ಎಂ ಎಸ್ಸಿ ಯಲ್ಲಿ ವಿಶ್ವವಿದ್ಯಾನಿಲಯದ ಚಿನ್ನದ ಪದಕವನ್ನು ರಾಜ್ಯಪಾಲರಿಂದ ಪಡೆದಿರುವ ಸಂಪಾಜೆ ಗ್ರಾಮದ ಮಂಗಳಪಾರೆ ಶೋಭಾನಾರಾಯಣ ರವರ ಪುತ್ರ ಅಶ್ವಥ್ ಎಂ ಎನ್ ಇವರಿಗೆ ಸನ್ಮಾನಿಸಲಾಯಿತು.
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…