ಸುದ್ದಿಗಳು

ಸ್ವಂತ ಜಾಗ, ಮನೆ ಇಲ್ಲ ಎಂಬ ಚಿಂತೆ ಬೇಡ: ಗ್ರಾಮ ಪಂಚಾಯತ್ ಕಡೆಯಿಂದ ಹೊಸ ಮನೆಗಳ ಮಂಜೂರು : ಸರ್ಕಾರದಿಂದ ಮಹತ್ವದ ಘೋಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಸ್ವಂತ ಸೂರಿಲ್ಲದೆ ಬದುಕುತ್ತಿರುವ ಜನ ಅದೆಷ್ಟೋ. ಸರ್ಕಾರ ಬದ ಜನರಿಗೆ ತನ್ನದೇ ಮನೆ ಹೋಂದ ಬೇಕು ಅನ್ನೋ ಕಾಳಜಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಇಂದಿಗೂ ಅನೇಕ ಜನರು ಸ್ವಂತ ಸೂರಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಈಗ  ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದ್ದಾರೆ. ಬಡವರ ಹಿತಾಸಕ್ತಿ ದೃಷ್ಠಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಗ್ರಾಮ ಪಂಚಾಯ್ತ್ ಮುಖಾಂತರ ನೀಡಲು ಸರ್ಕಾರವು ನಿರ್ಧರಿಸಿದೆ.

Advertisement

ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ 2 ವರ್ಷಗಳ ಕೋವಿಡ್‌ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣ ಗೊಳಿಸಲಾಗಿದೆ. ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಲಾಗಿದೆ.

ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ 5 ಲಕ್ಷ ಹೊಸ ಮನೆಗಳನ್ನು ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಚೆ ಪಡುವ ಮನೆಯನ್ನು ಆನ್ಲೈನ್‌ ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡುವ ಪಾರದರ್ಶಕತೆ ರೂಪಿಸಲಾಗಿದೆ.

ಈ ಉದ್ದೇಶಕ್ಕೆ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕೋಟಿ ರೂ ಒದಗಿಸುತ್ತಿಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗೋದು ಎಂದಿದ್ದಾರೆ. ಅತಿ ವೃಷ್ಠಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯಿಂದ ಪುನರ್‌ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂಗಳಿಗೆ ಹೆಚ್ಚಿಸಿದೆ.

ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3 ಲಕ್ಷದ 1 ಸಾವಿರದ 884 ಮನೆಗಳ ಪುನರ್‌ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಇಲ್ಲಿಯವರೆಗೆ 2 ಸಾವಿರದ 627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2 ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30 ಸಾವಿರ ಸ್ವತ್ತುಗಳನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

2 minutes ago

ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…

9 minutes ago

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

13 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

23 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

1 day ago