ಸುದ್ದಿಗಳು

ಸ್ವಂತ ಜಾಗ, ಮನೆ ಇಲ್ಲ ಎಂಬ ಚಿಂತೆ ಬೇಡ: ಗ್ರಾಮ ಪಂಚಾಯತ್ ಕಡೆಯಿಂದ ಹೊಸ ಮನೆಗಳ ಮಂಜೂರು : ಸರ್ಕಾರದಿಂದ ಮಹತ್ವದ ಘೋಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಸ್ವಂತ ಸೂರಿಲ್ಲದೆ ಬದುಕುತ್ತಿರುವ ಜನ ಅದೆಷ್ಟೋ. ಸರ್ಕಾರ ಬದ ಜನರಿಗೆ ತನ್ನದೇ ಮನೆ ಹೋಂದ ಬೇಕು ಅನ್ನೋ ಕಾಳಜಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಇಂದಿಗೂ ಅನೇಕ ಜನರು ಸ್ವಂತ ಸೂರಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಈಗ  ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದ್ದಾರೆ. ಬಡವರ ಹಿತಾಸಕ್ತಿ ದೃಷ್ಠಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಗ್ರಾಮ ಪಂಚಾಯ್ತ್ ಮುಖಾಂತರ ನೀಡಲು ಸರ್ಕಾರವು ನಿರ್ಧರಿಸಿದೆ.

Advertisement

ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ 2 ವರ್ಷಗಳ ಕೋವಿಡ್‌ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣ ಗೊಳಿಸಲಾಗಿದೆ. ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಲಾಗಿದೆ.

ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ 5 ಲಕ್ಷ ಹೊಸ ಮನೆಗಳನ್ನು ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಚೆ ಪಡುವ ಮನೆಯನ್ನು ಆನ್ಲೈನ್‌ ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡುವ ಪಾರದರ್ಶಕತೆ ರೂಪಿಸಲಾಗಿದೆ.

ಈ ಉದ್ದೇಶಕ್ಕೆ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕೋಟಿ ರೂ ಒದಗಿಸುತ್ತಿಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗೋದು ಎಂದಿದ್ದಾರೆ. ಅತಿ ವೃಷ್ಠಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯಿಂದ ಪುನರ್‌ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂಗಳಿಗೆ ಹೆಚ್ಚಿಸಿದೆ.

ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3 ಲಕ್ಷದ 1 ಸಾವಿರದ 884 ಮನೆಗಳ ಪುನರ್‌ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಇಲ್ಲಿಯವರೆಗೆ 2 ಸಾವಿರದ 627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2 ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30 ಸಾವಿರ ಸ್ವತ್ತುಗಳನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…

3 hours ago

ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

11 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

11 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

11 hours ago