Advertisement
ಸುದ್ದಿಗಳು

ಸ್ವಂತ ಜಾಗ, ಮನೆ ಇಲ್ಲ ಎಂಬ ಚಿಂತೆ ಬೇಡ: ಗ್ರಾಮ ಪಂಚಾಯತ್ ಕಡೆಯಿಂದ ಹೊಸ ಮನೆಗಳ ಮಂಜೂರು : ಸರ್ಕಾರದಿಂದ ಮಹತ್ವದ ಘೋಷಣೆ

Share

ರಾಜ್ಯದಲ್ಲಿ ಸ್ವಂತ ಸೂರಿಲ್ಲದೆ ಬದುಕುತ್ತಿರುವ ಜನ ಅದೆಷ್ಟೋ. ಸರ್ಕಾರ ಬದ ಜನರಿಗೆ ತನ್ನದೇ ಮನೆ ಹೋಂದ ಬೇಕು ಅನ್ನೋ ಕಾಳಜಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಇಂದಿಗೂ ಅನೇಕ ಜನರು ಸ್ವಂತ ಸೂರಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಈಗ  ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದ್ದಾರೆ. ಬಡವರ ಹಿತಾಸಕ್ತಿ ದೃಷ್ಠಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಗ್ರಾಮ ಪಂಚಾಯ್ತ್ ಮುಖಾಂತರ ನೀಡಲು ಸರ್ಕಾರವು ನಿರ್ಧರಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ 2 ವರ್ಷಗಳ ಕೋವಿಡ್‌ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣ ಗೊಳಿಸಲಾಗಿದೆ. ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಲಾಗಿದೆ.

ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ 5 ಲಕ್ಷ ಹೊಸ ಮನೆಗಳನ್ನು ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಚೆ ಪಡುವ ಮನೆಯನ್ನು ಆನ್ಲೈನ್‌ ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡುವ ಪಾರದರ್ಶಕತೆ ರೂಪಿಸಲಾಗಿದೆ.

ಈ ಉದ್ದೇಶಕ್ಕೆ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕೋಟಿ ರೂ ಒದಗಿಸುತ್ತಿಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗೋದು ಎಂದಿದ್ದಾರೆ. ಅತಿ ವೃಷ್ಠಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯಿಂದ ಪುನರ್‌ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂಗಳಿಗೆ ಹೆಚ್ಚಿಸಿದೆ.

ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3 ಲಕ್ಷದ 1 ಸಾವಿರದ 884 ಮನೆಗಳ ಪುನರ್‌ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಇಲ್ಲಿಯವರೆಗೆ 2 ಸಾವಿರದ 627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2 ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30 ಸಾವಿರ ಸ್ವತ್ತುಗಳನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

4 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

4 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

12 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

20 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago