Advertisement
ಸುದ್ದಿಗಳು

ಸ್ವಂತ ಜಾಗ, ಮನೆ ಇಲ್ಲ ಎಂಬ ಚಿಂತೆ ಬೇಡ: ಗ್ರಾಮ ಪಂಚಾಯತ್ ಕಡೆಯಿಂದ ಹೊಸ ಮನೆಗಳ ಮಂಜೂರು : ಸರ್ಕಾರದಿಂದ ಮಹತ್ವದ ಘೋಷಣೆ

Share

ರಾಜ್ಯದಲ್ಲಿ ಸ್ವಂತ ಸೂರಿಲ್ಲದೆ ಬದುಕುತ್ತಿರುವ ಜನ ಅದೆಷ್ಟೋ. ಸರ್ಕಾರ ಬದ ಜನರಿಗೆ ತನ್ನದೇ ಮನೆ ಹೋಂದ ಬೇಕು ಅನ್ನೋ ಕಾಳಜಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಇಂದಿಗೂ ಅನೇಕ ಜನರು ಸ್ವಂತ ಸೂರಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಈಗ  ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದ್ದಾರೆ. ಬಡವರ ಹಿತಾಸಕ್ತಿ ದೃಷ್ಠಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಗ್ರಾಮ ಪಂಚಾಯ್ತ್ ಮುಖಾಂತರ ನೀಡಲು ಸರ್ಕಾರವು ನಿರ್ಧರಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ 2 ವರ್ಷಗಳ ಕೋವಿಡ್‌ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣ ಗೊಳಿಸಲಾಗಿದೆ. ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಲಾಗಿದೆ.

ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ 5 ಲಕ್ಷ ಹೊಸ ಮನೆಗಳನ್ನು ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಚೆ ಪಡುವ ಮನೆಯನ್ನು ಆನ್ಲೈನ್‌ ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡುವ ಪಾರದರ್ಶಕತೆ ರೂಪಿಸಲಾಗಿದೆ.

ಈ ಉದ್ದೇಶಕ್ಕೆ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕೋಟಿ ರೂ ಒದಗಿಸುತ್ತಿಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗೋದು ಎಂದಿದ್ದಾರೆ. ಅತಿ ವೃಷ್ಠಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯಿಂದ ಪುನರ್‌ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂಗಳಿಗೆ ಹೆಚ್ಚಿಸಿದೆ.

ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3 ಲಕ್ಷದ 1 ಸಾವಿರದ 884 ಮನೆಗಳ ಪುನರ್‌ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಇಲ್ಲಿಯವರೆಗೆ 2 ಸಾವಿರದ 627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2 ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30 ಸಾವಿರ ಸ್ವತ್ತುಗಳನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago