Advertisement
ಸುದ್ದಿಗಳು

ಸ್ವಂತ ಜಾಗ, ಮನೆ ಇಲ್ಲ ಎಂಬ ಚಿಂತೆ ಬೇಡ: ಗ್ರಾಮ ಪಂಚಾಯತ್ ಕಡೆಯಿಂದ ಹೊಸ ಮನೆಗಳ ಮಂಜೂರು : ಸರ್ಕಾರದಿಂದ ಮಹತ್ವದ ಘೋಷಣೆ

Share

ರಾಜ್ಯದಲ್ಲಿ ಸ್ವಂತ ಸೂರಿಲ್ಲದೆ ಬದುಕುತ್ತಿರುವ ಜನ ಅದೆಷ್ಟೋ. ಸರ್ಕಾರ ಬದ ಜನರಿಗೆ ತನ್ನದೇ ಮನೆ ಹೋಂದ ಬೇಕು ಅನ್ನೋ ಕಾಳಜಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಇಂದಿಗೂ ಅನೇಕ ಜನರು ಸ್ವಂತ ಸೂರಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಈಗ  ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದ್ದಾರೆ. ಬಡವರ ಹಿತಾಸಕ್ತಿ ದೃಷ್ಠಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಗ್ರಾಮ ಪಂಚಾಯ್ತ್ ಮುಖಾಂತರ ನೀಡಲು ಸರ್ಕಾರವು ನಿರ್ಧರಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ 2 ವರ್ಷಗಳ ಕೋವಿಡ್‌ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣ ಗೊಳಿಸಲಾಗಿದೆ. ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಲಾಗಿದೆ.

ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ 5 ಲಕ್ಷ ಹೊಸ ಮನೆಗಳನ್ನು ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಚೆ ಪಡುವ ಮನೆಯನ್ನು ಆನ್ಲೈನ್‌ ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡುವ ಪಾರದರ್ಶಕತೆ ರೂಪಿಸಲಾಗಿದೆ.

ಈ ಉದ್ದೇಶಕ್ಕೆ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕೋಟಿ ರೂ ಒದಗಿಸುತ್ತಿಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗೋದು ಎಂದಿದ್ದಾರೆ. ಅತಿ ವೃಷ್ಠಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯಿಂದ ಪುನರ್‌ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂಗಳಿಗೆ ಹೆಚ್ಚಿಸಿದೆ.

ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3 ಲಕ್ಷದ 1 ಸಾವಿರದ 884 ಮನೆಗಳ ಪುನರ್‌ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಇಲ್ಲಿಯವರೆಗೆ 2 ಸಾವಿರದ 627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2 ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30 ಸಾವಿರ ಸ್ವತ್ತುಗಳನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

6 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

14 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

15 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

15 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago