Advertisement
ಸುದ್ದಿಗಳು

ಸ್ವಂತ ಜಾಗ, ಮನೆ ಇಲ್ಲ ಎಂಬ ಚಿಂತೆ ಬೇಡ: ಗ್ರಾಮ ಪಂಚಾಯತ್ ಕಡೆಯಿಂದ ಹೊಸ ಮನೆಗಳ ಮಂಜೂರು : ಸರ್ಕಾರದಿಂದ ಮಹತ್ವದ ಘೋಷಣೆ

Share

ರಾಜ್ಯದಲ್ಲಿ ಸ್ವಂತ ಸೂರಿಲ್ಲದೆ ಬದುಕುತ್ತಿರುವ ಜನ ಅದೆಷ್ಟೋ. ಸರ್ಕಾರ ಬದ ಜನರಿಗೆ ತನ್ನದೇ ಮನೆ ಹೋಂದ ಬೇಕು ಅನ್ನೋ ಕಾಳಜಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಇಂದಿಗೂ ಅನೇಕ ಜನರು ಸ್ವಂತ ಸೂರಿಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಈಗ  ಮುಖ್ಯಮಂತ್ರಿಯವರು ಎಲ್ಲಾ ರಾಜ್ಯದ ಜನತೆಗೆ ಸೂರು ಒದಗಿಸಲು ವಿಶೇಷ ಆದ್ಯತೆ ನೀಡಿದ್ದಾರೆ. ಬಡವರ ಹಿತಾಸಕ್ತಿ ದೃಷ್ಠಿಯಿಂದ ಸರ್ಕಾರವು ಮನೆ ಇಲ್ಲದಂತಹ ಎಲ್ಲಾ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡಲು ಗ್ರಾಮ ಪಂಚಾಯ್ತ್ ಮುಖಾಂತರ ನೀಡಲು ಸರ್ಕಾರವು ನಿರ್ಧರಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ 2 ವರ್ಷಗಳ ಕೋವಿಡ್‌ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನ ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣ ಗೊಳಿಸಲಾಗಿದೆ. ಹಾಗೆಯೇ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಲಾಗಿದೆ.

ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ 5 ಲಕ್ಷ ಹೊಸ ಮನೆಗಳನ್ನು ಪೂರ್ಣಗೊಳಿಸಿ ಅನುಮೋದನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಯೋಜನೆಯಡಿ ಇಚ್ಚೆ ಪಡುವ ಮನೆಯನ್ನು ಆನ್ಲೈನ್‌ ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡುವ ಪಾರದರ್ಶಕತೆ ರೂಪಿಸಲಾಗಿದೆ.

ಈ ಉದ್ದೇಶಕ್ಕೆ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕೋಟಿ ರೂ ಒದಗಿಸುತ್ತಿಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗೋದು ಎಂದಿದ್ದಾರೆ. ಅತಿ ವೃಷ್ಠಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಯಿಂದ ಪುನರ್‌ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂಗಳಿಗೆ ಹೆಚ್ಚಿಸಿದೆ.

ವಿವಿಧ ವರ್ಗಗಳ ಅಡಿಯಲ್ಲಿ ಕಳೆದ 4 ವರ್ಷಗಳಲ್ಲಿ 3 ಲಕ್ಷದ 1 ಸಾವಿರದ 884 ಮನೆಗಳ ಪುನರ್‌ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಇಲ್ಲಿಯವರೆಗೆ 2 ಸಾವಿರದ 627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2 ಸಾವಿರ ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30 ಸಾವಿರ ಸ್ವತ್ತುಗಳನ್ನು ಅಭಿವೃದ್ದಿಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

57 minutes ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

6 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

8 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

9 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

17 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

18 hours ago