ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ | ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತ ಪಾವತಿಸಿ ಮರಳನ್ನು ಪಡೆಯಬಹುದು |

April 5, 2022
8:53 PM

ಕರ್ನಾಟಕ ಉಪ ಖನಿಜ ಯಾಯಿತಿ ನಿಯಮಗಳು 1994 ರ ತಿದ್ದುಪಡಿ ನಿಯಮಗಳು 2021 ಹಾಗೂ ಹೊಸ ಮರಳು ನೀತಿ-2020 ಅನ್ವಯ ಜಿಲ್ಲೆಯ ಮಂಗಳೂರು ತಾಲ್ಲೂಕು ಫಲ್ಗುಣಿ ನದಿ ಪಾತ್ರದ ಅದ್ಯಪಾಡಿ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಮತ್ತು ಬಂಟ್ವಾಳ ತಾಲ್ಲೂಕು ನೇತ್ರಾವತಿ ನದಿ ಪಾತ್ರದ ಶಂಭೂರು ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಹೂಳಿನೊಂದಿಗೆ ಮರಳನ್ನು ತೆಗೆಯಲು ಜಿಲ್ಲಾ ಮರಳು ಸಮಿತಿಯಿಂದ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ ಇವರಿಗೆ ಅಧಿಸೂಚನೆ ಹೊರಡಿಸಿ ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಸದರಿ ಡ್ಯಾಂಗಳಲ್ಲಿ ಹೂಳಿನೊಂದಿಗೆ ದೊರಕುವ ಮರಳನ್ನು ತೆಗೆದು ಸ್ಟಾಕ್‍ಯಾರ್ಡ್‍ನಲ್ಲಿ ಶೇಖರಣೆ ಮಾಡುತ್ತಿದ್ದು, ಅದ್ಯಪಾಡಿ ಮರಳು ದಾಸ್ತಾನು ಪ್ರದೇಶದಲ್ಲಿ ಸುಮಾರು 15,000 ಮೆ.ಟನ್ ಮತ್ತು ಶಂಭೂರು ಮರಳು ದಾಸ್ತಾನು ಪ್ರದೇಶದಲ್ಲಿ ಅಂದಾಜು 700 ಮಟನ್ ಮರಳು ಲಭ್ಯವಿರುತ್ತದೆ.
ಈ ಮರಳನ್ನು ಸಾರ್ವಜನಿಕರಿಗೆ ಗ್ರಾಹಕರಿಗೆ ಕಾಮಗಾರಿಗಳಿಗೆ ಕೆ.ಎಸ್.ಎಂ.ಸಿ.ಎಲ್. ವತಿಯಿಂದ ಖನಿಜ ಸಾಗಾಣಿಕೆ ಪರವಾನಿಗೆಯೊಂದಿಗೆ ವಿತರಿಸಲಾಗುವುದು.

ಸಾರ್ವಜನಿಕರು ಕಾಮಗಾರಿಗಳ ಗುತ್ತಿಗೆದಾರರು ಮರಳು ಮಿತ್ರ ಆ್ಯಪ್ ಮುಖಾಂತರ  ಅಥವಾ ಸಹಾಯವಾಣಿ ಸಂಖ್ಯೆ 080-28055000 ಮೂಲಕ ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತವನ್ನು ಪಾವತಿಸಿ ಮರಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಮರಳು ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror