MIRROR FOCUS

ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ | ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತ ಪಾವತಿಸಿ ಮರಳನ್ನು ಪಡೆಯಬಹುದು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ಉಪ ಖನಿಜ ಯಾಯಿತಿ ನಿಯಮಗಳು 1994 ರ ತಿದ್ದುಪಡಿ ನಿಯಮಗಳು 2021 ಹಾಗೂ ಹೊಸ ಮರಳು ನೀತಿ-2020 ಅನ್ವಯ ಜಿಲ್ಲೆಯ ಮಂಗಳೂರು ತಾಲ್ಲೂಕು ಫಲ್ಗುಣಿ ನದಿ ಪಾತ್ರದ ಅದ್ಯಪಾಡಿ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಮತ್ತು ಬಂಟ್ವಾಳ ತಾಲ್ಲೂಕು ನೇತ್ರಾವತಿ ನದಿ ಪಾತ್ರದ ಶಂಭೂರು ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಹೂಳಿನೊಂದಿಗೆ ಮರಳನ್ನು ತೆಗೆಯಲು ಜಿಲ್ಲಾ ಮರಳು ಸಮಿತಿಯಿಂದ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ ಇವರಿಗೆ ಅಧಿಸೂಚನೆ ಹೊರಡಿಸಿ ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

ಪ್ರಸ್ತುತ ಸದರಿ ಡ್ಯಾಂಗಳಲ್ಲಿ ಹೂಳಿನೊಂದಿಗೆ ದೊರಕುವ ಮರಳನ್ನು ತೆಗೆದು ಸ್ಟಾಕ್‍ಯಾರ್ಡ್‍ನಲ್ಲಿ ಶೇಖರಣೆ ಮಾಡುತ್ತಿದ್ದು, ಅದ್ಯಪಾಡಿ ಮರಳು ದಾಸ್ತಾನು ಪ್ರದೇಶದಲ್ಲಿ ಸುಮಾರು 15,000 ಮೆ.ಟನ್ ಮತ್ತು ಶಂಭೂರು ಮರಳು ದಾಸ್ತಾನು ಪ್ರದೇಶದಲ್ಲಿ ಅಂದಾಜು 700 ಮಟನ್ ಮರಳು ಲಭ್ಯವಿರುತ್ತದೆ.
ಈ ಮರಳನ್ನು ಸಾರ್ವಜನಿಕರಿಗೆ ಗ್ರಾಹಕರಿಗೆ ಕಾಮಗಾರಿಗಳಿಗೆ ಕೆ.ಎಸ್.ಎಂ.ಸಿ.ಎಲ್. ವತಿಯಿಂದ ಖನಿಜ ಸಾಗಾಣಿಕೆ ಪರವಾನಿಗೆಯೊಂದಿಗೆ ವಿತರಿಸಲಾಗುವುದು.

ಸಾರ್ವಜನಿಕರು ಕಾಮಗಾರಿಗಳ ಗುತ್ತಿಗೆದಾರರು ಮರಳು ಮಿತ್ರ ಆ್ಯಪ್ ಮುಖಾಂತರ  ಅಥವಾ ಸಹಾಯವಾಣಿ ಸಂಖ್ಯೆ 080-28055000 ಮೂಲಕ ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತವನ್ನು ಪಾವತಿಸಿ ಮರಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಮರಳು ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

8 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

9 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

10 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

10 hours ago

ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು | ವಾಹನ ಸವಾರರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ…

10 hours ago

ತಾಳಮದ್ದಳೆ ಸಪ್ತಾಹ ಸಮಾರೋಪ | ಕುರಿಯ ಪ್ರಶಸ್ತಿ ಪ್ರದಾನ ಪ್ರಶಸ್ತಿ ಪಡೆವ ಕಲಾವಿದನ ಬದುಕು ಆದರ್ಶವಾಗಿರಬೇಕು

ಓರ್ವ ಕಲಾವಿದ ಸಮಾಜಮುಖಿಯಾಗಿ, ಕಲಾತ್ಮಕವಾಗಿ ಹೇಗೆ ಬದುಕಬೇಕೆನ್ನುವುದನ್ನು ಹಾಸ್ಯಗಾರ್ ದಿ.ಪೆರುವಡಿ ನಾರಾಯಣ ಭಟ್ಟರು…

10 hours ago