Advertisement
MIRROR FOCUS

ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ | ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತ ಪಾವತಿಸಿ ಮರಳನ್ನು ಪಡೆಯಬಹುದು |

Share

ಕರ್ನಾಟಕ ಉಪ ಖನಿಜ ಯಾಯಿತಿ ನಿಯಮಗಳು 1994 ರ ತಿದ್ದುಪಡಿ ನಿಯಮಗಳು 2021 ಹಾಗೂ ಹೊಸ ಮರಳು ನೀತಿ-2020 ಅನ್ವಯ ಜಿಲ್ಲೆಯ ಮಂಗಳೂರು ತಾಲ್ಲೂಕು ಫಲ್ಗುಣಿ ನದಿ ಪಾತ್ರದ ಅದ್ಯಪಾಡಿ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಮತ್ತು ಬಂಟ್ವಾಳ ತಾಲ್ಲೂಕು ನೇತ್ರಾವತಿ ನದಿ ಪಾತ್ರದ ಶಂಭೂರು ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಹೂಳಿನೊಂದಿಗೆ ಮರಳನ್ನು ತೆಗೆಯಲು ಜಿಲ್ಲಾ ಮರಳು ಸಮಿತಿಯಿಂದ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ ಇವರಿಗೆ ಅಧಿಸೂಚನೆ ಹೊರಡಿಸಿ ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಸದರಿ ಡ್ಯಾಂಗಳಲ್ಲಿ ಹೂಳಿನೊಂದಿಗೆ ದೊರಕುವ ಮರಳನ್ನು ತೆಗೆದು ಸ್ಟಾಕ್‍ಯಾರ್ಡ್‍ನಲ್ಲಿ ಶೇಖರಣೆ ಮಾಡುತ್ತಿದ್ದು, ಅದ್ಯಪಾಡಿ ಮರಳು ದಾಸ್ತಾನು ಪ್ರದೇಶದಲ್ಲಿ ಸುಮಾರು 15,000 ಮೆ.ಟನ್ ಮತ್ತು ಶಂಭೂರು ಮರಳು ದಾಸ್ತಾನು ಪ್ರದೇಶದಲ್ಲಿ ಅಂದಾಜು 700 ಮಟನ್ ಮರಳು ಲಭ್ಯವಿರುತ್ತದೆ.
ಈ ಮರಳನ್ನು ಸಾರ್ವಜನಿಕರಿಗೆ ಗ್ರಾಹಕರಿಗೆ ಕಾಮಗಾರಿಗಳಿಗೆ ಕೆ.ಎಸ್.ಎಂ.ಸಿ.ಎಲ್. ವತಿಯಿಂದ ಖನಿಜ ಸಾಗಾಣಿಕೆ ಪರವಾನಿಗೆಯೊಂದಿಗೆ ವಿತರಿಸಲಾಗುವುದು.

ಸಾರ್ವಜನಿಕರು ಕಾಮಗಾರಿಗಳ ಗುತ್ತಿಗೆದಾರರು ಮರಳು ಮಿತ್ರ ಆ್ಯಪ್ ಮುಖಾಂತರ  ಅಥವಾ ಸಹಾಯವಾಣಿ ಸಂಖ್ಯೆ 080-28055000 ಮೂಲಕ ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತವನ್ನು ಪಾವತಿಸಿ ಮರಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಮರಳು ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

19 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

20 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

23 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago