ಕರ್ನಾಟಕ ಉಪ ಖನಿಜ ಯಾಯಿತಿ ನಿಯಮಗಳು 1994 ರ ತಿದ್ದುಪಡಿ ನಿಯಮಗಳು 2021 ಹಾಗೂ ಹೊಸ ಮರಳು ನೀತಿ-2020 ಅನ್ವಯ ಜಿಲ್ಲೆಯ ಮಂಗಳೂರು ತಾಲ್ಲೂಕು ಫಲ್ಗುಣಿ ನದಿ ಪಾತ್ರದ ಅದ್ಯಪಾಡಿ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಮತ್ತು ಬಂಟ್ವಾಳ ತಾಲ್ಲೂಕು ನೇತ್ರಾವತಿ ನದಿ ಪಾತ್ರದ ಶಂಭೂರು ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಹೂಳಿನೊಂದಿಗೆ ಮರಳನ್ನು ತೆಗೆಯಲು ಜಿಲ್ಲಾ ಮರಳು ಸಮಿತಿಯಿಂದ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ ಇವರಿಗೆ ಅಧಿಸೂಚನೆ ಹೊರಡಿಸಿ ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಸದರಿ ಡ್ಯಾಂಗಳಲ್ಲಿ ಹೂಳಿನೊಂದಿಗೆ ದೊರಕುವ ಮರಳನ್ನು ತೆಗೆದು ಸ್ಟಾಕ್ಯಾರ್ಡ್ನಲ್ಲಿ ಶೇಖರಣೆ ಮಾಡುತ್ತಿದ್ದು, ಅದ್ಯಪಾಡಿ ಮರಳು ದಾಸ್ತಾನು ಪ್ರದೇಶದಲ್ಲಿ ಸುಮಾರು 15,000 ಮೆ.ಟನ್ ಮತ್ತು ಶಂಭೂರು ಮರಳು ದಾಸ್ತಾನು ಪ್ರದೇಶದಲ್ಲಿ ಅಂದಾಜು 700 ಮಟನ್ ಮರಳು ಲಭ್ಯವಿರುತ್ತದೆ.
ಈ ಮರಳನ್ನು ಸಾರ್ವಜನಿಕರಿಗೆ ಗ್ರಾಹಕರಿಗೆ ಕಾಮಗಾರಿಗಳಿಗೆ ಕೆ.ಎಸ್.ಎಂ.ಸಿ.ಎಲ್. ವತಿಯಿಂದ ಖನಿಜ ಸಾಗಾಣಿಕೆ ಪರವಾನಿಗೆಯೊಂದಿಗೆ ವಿತರಿಸಲಾಗುವುದು.
ಸಾರ್ವಜನಿಕರು ಕಾಮಗಾರಿಗಳ ಗುತ್ತಿಗೆದಾರರು ಮರಳು ಮಿತ್ರ ಆ್ಯಪ್ ಮುಖಾಂತರ ಅಥವಾ ಸಹಾಯವಾಣಿ ಸಂಖ್ಯೆ 080-28055000 ಮೂಲಕ ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತವನ್ನು ಪಾವತಿಸಿ ಮರಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಮರಳು ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲಲಿ ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…