ಸುಳ್ಯದ ಸಾಂದಿಪ್ ಶಾಲೆ ಕಳೆದೆರಡು ದಶಕಗಳಿಂದ ದಿವ್ಯಾಂಗ ಮಕ್ಕಳನ್ನು ಮುಖ್ಯವಾಹಿನಿಗೆ ತರುವ
ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಮಕ್ಕಳ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನ ಕ್ರೀಡಾಕೂಟದಲ್ಲಿ ಸುಳ್ಯದ ಸಾಂದಿಪ್ ಶಾಲೆ ಮಕ್ಕಳು ಬಹುಮಾನಗಳನ್ನು ಬಾಚಿಕೊಂಡಿದ್ದು, ಆ ಬಹುಮಾನವನ್ನು ಅವರ ಹೆತ್ತವರ ಸಮ್ಮುಖದಲ್ಲಿ ವಿತರಿಸಿ ಅಭಿನಂದಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆ ಚಾಂದಿನಿ ಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ತೊಡಿಕಾನದ ಪ್ರಗತಿಪರ ಕೃಷಿಕ ಕೇಶವಪ್ರಸಾದ್ ಹಾಗೂ ನಳಿನಿ ದಂಪತಿಗಳು ವಿವಾಹ ವಾರ್ಷಿಕೋತ್ಸವ ಸಲುವಾಗಿ ಪ್ರಾಯೋಜಿಸಿದ್ದರು.
ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಎಂ. ಬಿ ಸದಾಶಿವರು ಪ್ರಾಸ್ತಾವಿಕ ಮಾತನಾಡಿದರು. ಹರಿಣಿ ಸದಾಶಿವ ವಂದಿಸಿದರು. ಕೇಶವ ಪ್ರಸಾದ್, ಲೋಕೇಶ್ ಕೆರೆಮೂಲೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…