ಸುಳ್ಯದ ಸಾಂದಿಪ್ ಶಾಲೆ ಕಳೆದೆರಡು ದಶಕಗಳಿಂದ ದಿವ್ಯಾಂಗ ಮಕ್ಕಳನ್ನು ಮುಖ್ಯವಾಹಿನಿಗೆ ತರುವ
ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಮಕ್ಕಳ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನ ಕ್ರೀಡಾಕೂಟದಲ್ಲಿ ಸುಳ್ಯದ ಸಾಂದಿಪ್ ಶಾಲೆ ಮಕ್ಕಳು ಬಹುಮಾನಗಳನ್ನು ಬಾಚಿಕೊಂಡಿದ್ದು, ಆ ಬಹುಮಾನವನ್ನು ಅವರ ಹೆತ್ತವರ ಸಮ್ಮುಖದಲ್ಲಿ ವಿತರಿಸಿ ಅಭಿನಂದಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆ ಚಾಂದಿನಿ ಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ತೊಡಿಕಾನದ ಪ್ರಗತಿಪರ ಕೃಷಿಕ ಕೇಶವಪ್ರಸಾದ್ ಹಾಗೂ ನಳಿನಿ ದಂಪತಿಗಳು ವಿವಾಹ ವಾರ್ಷಿಕೋತ್ಸವ ಸಲುವಾಗಿ ಪ್ರಾಯೋಜಿಸಿದ್ದರು.
ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಎಂ. ಬಿ ಸದಾಶಿವರು ಪ್ರಾಸ್ತಾವಿಕ ಮಾತನಾಡಿದರು. ಹರಿಣಿ ಸದಾಶಿವ ವಂದಿಸಿದರು. ಕೇಶವ ಪ್ರಸಾದ್, ಲೋಕೇಶ್ ಕೆರೆಮೂಲೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…