ಸುಳ್ಯದ ಸಾಂದಿಪ್ ಶಾಲೆ ಕಳೆದೆರಡು ದಶಕಗಳಿಂದ ದಿವ್ಯಾಂಗ ಮಕ್ಕಳನ್ನು ಮುಖ್ಯವಾಹಿನಿಗೆ ತರುವ
ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಮಕ್ಕಳ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನ ಕ್ರೀಡಾಕೂಟದಲ್ಲಿ ಸುಳ್ಯದ ಸಾಂದಿಪ್ ಶಾಲೆ ಮಕ್ಕಳು ಬಹುಮಾನಗಳನ್ನು ಬಾಚಿಕೊಂಡಿದ್ದು, ಆ ಬಹುಮಾನವನ್ನು ಅವರ ಹೆತ್ತವರ ಸಮ್ಮುಖದಲ್ಲಿ ವಿತರಿಸಿ ಅಭಿನಂದಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆ ಚಾಂದಿನಿ ಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ತೊಡಿಕಾನದ ಪ್ರಗತಿಪರ ಕೃಷಿಕ ಕೇಶವಪ್ರಸಾದ್ ಹಾಗೂ ನಳಿನಿ ದಂಪತಿಗಳು ವಿವಾಹ ವಾರ್ಷಿಕೋತ್ಸವ ಸಲುವಾಗಿ ಪ್ರಾಯೋಜಿಸಿದ್ದರು.
ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಎಂ. ಬಿ ಸದಾಶಿವರು ಪ್ರಾಸ್ತಾವಿಕ ಮಾತನಾಡಿದರು. ಹರಿಣಿ ಸದಾಶಿವ ವಂದಿಸಿದರು. ಕೇಶವ ಪ್ರಸಾದ್, ಲೋಕೇಶ್ ಕೆರೆಮೂಲೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…