ಸುಳ್ಯದ ಸಾಂದಿಪ್ ಶಾಲೆ ಕಳೆದೆರಡು ದಶಕಗಳಿಂದ ದಿವ್ಯಾಂಗ ಮಕ್ಕಳನ್ನು ಮುಖ್ಯವಾಹಿನಿಗೆ ತರುವ
ನಿರಂತರ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಮಕ್ಕಳ ಅಭಿವೃದ್ದಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನ ಕ್ರೀಡಾಕೂಟದಲ್ಲಿ ಸುಳ್ಯದ ಸಾಂದಿಪ್ ಶಾಲೆ ಮಕ್ಕಳು ಬಹುಮಾನಗಳನ್ನು ಬಾಚಿಕೊಂಡಿದ್ದು, ಆ ಬಹುಮಾನವನ್ನು ಅವರ ಹೆತ್ತವರ ಸಮ್ಮುಖದಲ್ಲಿ ವಿತರಿಸಿ ಅಭಿನಂದಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆ ಚಾಂದಿನಿ ಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ತೊಡಿಕಾನದ ಪ್ರಗತಿಪರ ಕೃಷಿಕ ಕೇಶವಪ್ರಸಾದ್ ಹಾಗೂ ನಳಿನಿ ದಂಪತಿಗಳು ವಿವಾಹ ವಾರ್ಷಿಕೋತ್ಸವ ಸಲುವಾಗಿ ಪ್ರಾಯೋಜಿಸಿದ್ದರು.
ಶರೀಫ್ ಜಟ್ಟಿಪಳ್ಳ ಸ್ವಾಗತಿಸಿ, ಎಂ. ಬಿ ಸದಾಶಿವರು ಪ್ರಾಸ್ತಾವಿಕ ಮಾತನಾಡಿದರು. ಹರಿಣಿ ಸದಾಶಿವ ವಂದಿಸಿದರು. ಕೇಶವ ಪ್ರಸಾದ್, ಲೋಕೇಶ್ ಕೆರೆಮೂಲೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…