ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

April 15, 2026
10:40 PM
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ ಶಾಸ್ತ್ರೀಯ ಸಂಗೀತ ಪ್ರದರ್ಶನ ನಡೆಯಲಿದ್ದು, ಸಂಗೀತಾಭಿಮಾನಿಗಳಿಗೆ ವಿಶೇಷ ಅವಕಾಶ ಸಿಗಲಿದೆ.

ಸಂಗೀತಾಭಿಮಾನಿಗಳಿಗೆ ಒಂದು ವಿಶೇಷ ಸಾಂಸ್ಕೃತಿಕ ಹಬ್ಬ ಸಜ್ಜಾಗುತ್ತಿದೆ. ರಂಜನಿ ಸಂಗೀತ ಸಭಾ (ರಿ.) ಎಲಿಮಲೆ  ವತಿಯಿಂದ ಏರ್ಪಡಿಸಿರುವ ‘ಸಂಗೀತ ಸಂಭ್ರಮ’ ಕಾರ್ಯಕ್ರಮವು ಏಪ್ರಿಲ್ 19, 2026 ಭಾನುವಾರ ಸಂಜೆ ನಡೆಯಲಿದೆ. ಈ ಕಾರ್ಯಕ್ರಮವು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಗಂಣದಲ್ಲಿ ನಡೆಯಲಿದೆ. ಸಂಜೆ 5:30 ರಿಂದ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ. ಹಾಡುಗಾರಿಕೆಯಲ್ಲಿ ವಿದ್ವಾನ್‌ ಸಾಯಿ ವಿಘ್ನೇಶ್‌ ಚೆನ್ನೈ ಹಾಗೂ ಪಿಟೀಲಿನಲ್ಲಿ ವಿದ್ವಾನ್‌ ಕೇಶವ ಮೋಹನಕುಮಾರ್‌ ಮೈಸೂರು, ಮೃದಂಗದಲ್ಲಿ  ವಿದ್ವಾನ್ ಬಿ. ಎಸ್‌ ಪ್ರಶಾಂತ ಬೆಂಗಳೂರು, ಘಟಂನಲ್ಲಿ  ವಿದ್ವಾನ್‌ ಶ್ರೀ ಹರ್ಷ ಉಡುಪ ಬೆಂಗಳೂರು ಭಾಗವಹಿಸಲಿದ್ದಾರೆ.  ಭಾರತೀಯ ಶಾಸ್ತ್ರೀಯ ಸಂಗೀತದ ಸೊಗಡನ್ನು ಅನುಭವಿಸಲು ಈ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಲಿದೆ. ಹೆಚ್ಚಿನ ಮಾಹಿತಿಗೆ ರಂಜನಿ ಸಂಗೀತ ಸಭಾದ ಸಂಪರ್ಕ ಸಂಖ್ಯೆ: 9483412340 / 9008394940 ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

“Sangeetha Sambhrama” will be Arranged by Ranjani Sangeetha Sabha, Elimale on April 19, 2026 at Valalambhe Sri Shankhapala Subrahmanya Temple, Guthigaru in Sullia. Renowned Carnatic musicians will perform in the evening program starting at 5:30 PM.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror