ಸಂಗೀತಾಭಿಮಾನಿಗಳಿಗೆ ಒಂದು ವಿಶೇಷ ಸಾಂಸ್ಕೃತಿಕ ಹಬ್ಬ ಸಜ್ಜಾಗುತ್ತಿದೆ. ರಂಜನಿ ಸಂಗೀತ ಸಭಾ (ರಿ.) ಎಲಿಮಲೆ ವತಿಯಿಂದ ಏರ್ಪಡಿಸಿರುವ ‘ಸಂಗೀತ ಸಂಭ್ರಮ’ ಕಾರ್ಯಕ್ರಮವು ಏಪ್ರಿಲ್ 19, 2026 ಭಾನುವಾರ ಸಂಜೆ ನಡೆಯಲಿದೆ. ಈ ಕಾರ್ಯಕ್ರಮವು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಗಂಣದಲ್ಲಿ ನಡೆಯಲಿದೆ. ಸಂಜೆ 5:30 ರಿಂದ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ. ಹಾಡುಗಾರಿಕೆಯಲ್ಲಿ ವಿದ್ವಾನ್ ಸಾಯಿ ವಿಘ್ನೇಶ್ ಚೆನ್ನೈ ಹಾಗೂ ಪಿಟೀಲಿನಲ್ಲಿ ವಿದ್ವಾನ್ ಕೇಶವ ಮೋಹನಕುಮಾರ್ ಮೈಸೂರು, ಮೃದಂಗದಲ್ಲಿ ವಿದ್ವಾನ್ ಬಿ. ಎಸ್ ಪ್ರಶಾಂತ ಬೆಂಗಳೂರು, ಘಟಂನಲ್ಲಿ ವಿದ್ವಾನ್ ಶ್ರೀ ಹರ್ಷ ಉಡುಪ ಬೆಂಗಳೂರು ಭಾಗವಹಿಸಲಿದ್ದಾರೆ. ಭಾರತೀಯ ಶಾಸ್ತ್ರೀಯ ಸಂಗೀತದ ಸೊಗಡನ್ನು ಅನುಭವಿಸಲು ಈ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಲಿದೆ. ಹೆಚ್ಚಿನ ಮಾಹಿತಿಗೆ ರಂಜನಿ ಸಂಗೀತ ಸಭಾದ ಸಂಪರ್ಕ ಸಂಖ್ಯೆ: 9483412340 / 9008394940 ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
“Sangeetha Sambhrama” will be Arranged by Ranjani Sangeetha Sabha, Elimale on April 19, 2026 at Valalambhe Sri Shankhapala Subrahmanya Temple, Guthigaru in Sullia. Renowned Carnatic musicians will perform in the evening program starting at 5:30 PM.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…