ಸಂಗೀತಾಭಿಮಾನಿಗಳಿಗೆ ಒಂದು ವಿಶೇಷ ಸಾಂಸ್ಕೃತಿಕ ಹಬ್ಬ ಸಜ್ಜಾಗುತ್ತಿದೆ. ರಂಜನಿ ಸಂಗೀತ ಸಭಾ (ರಿ.) ಎಲಿಮಲೆ ವತಿಯಿಂದ ಏರ್ಪಡಿಸಿರುವ ‘ಸಂಗೀತ ಸಂಭ್ರಮ’ ಕಾರ್ಯಕ್ರಮವು ಏಪ್ರಿಲ್ 19, 2026 ಭಾನುವಾರ ಸಂಜೆ ನಡೆಯಲಿದೆ. ಈ ಕಾರ್ಯಕ್ರಮವು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಗಂಣದಲ್ಲಿ ನಡೆಯಲಿದೆ. ಸಂಜೆ 5:30 ರಿಂದ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ. ಹಾಡುಗಾರಿಕೆಯಲ್ಲಿ ವಿದ್ವಾನ್ ಸಾಯಿ ವಿಘ್ನೇಶ್ ಚೆನ್ನೈ ಹಾಗೂ ಪಿಟೀಲಿನಲ್ಲಿ ವಿದ್ವಾನ್ ಕೇಶವ ಮೋಹನಕುಮಾರ್ ಮೈಸೂರು, ಮೃದಂಗದಲ್ಲಿ ವಿದ್ವಾನ್ ಬಿ. ಎಸ್ ಪ್ರಶಾಂತ ಬೆಂಗಳೂರು, ಘಟಂನಲ್ಲಿ ವಿದ್ವಾನ್ ಶ್ರೀ ಹರ್ಷ ಉಡುಪ ಬೆಂಗಳೂರು ಭಾಗವಹಿಸಲಿದ್ದಾರೆ. ಭಾರತೀಯ ಶಾಸ್ತ್ರೀಯ ಸಂಗೀತದ ಸೊಗಡನ್ನು ಅನುಭವಿಸಲು ಈ ಕಾರ್ಯಕ್ರಮ ಅತ್ಯುತ್ತಮ ವೇದಿಕೆಯಾಗಲಿದೆ. ಹೆಚ್ಚಿನ ಮಾಹಿತಿಗೆ ರಂಜನಿ ಸಂಗೀತ ಸಭಾದ ಸಂಪರ್ಕ ಸಂಖ್ಯೆ: 9483412340 / 9008394940 ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
“Sangeetha Sambhrama” will be Arranged by Ranjani Sangeetha Sabha, Elimale on April 19, 2026 at Valalambhe Sri Shankhapala Subrahmanya Temple, Guthigaru in Sullia. Renowned Carnatic musicians will perform in the evening program starting at 5:30 PM.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…