ರಾಜ್ಯ

ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕ ಸಂಜೀವ ಮಟಂದೂರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸರಕಾರವನ್ನು  ಒತ್ತಾಯಿಸಿದ್ದಾರೆ.

Advertisement
ಸಂಜೀವ ಮಟಂದೂರು, ಶಾಸಕರು
ವಿಧಾನ ಮಂಡಲ ಅಧಿವೇಶನದಲ್ಲಿ  ಬುಧವಾರ ಪ್ರಶ್ನೆ ಸಂಖ್ಯೆ 212 ರಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ರಸ್ತೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ನೀಡಿದ ಉತ್ತರ ತೃಪ್ತಿದಾಯಕವಾಗದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ ಸಂಜೀವ ಮಟಂದೂರು ಅವರು, “ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ  ಸುಮಾರು 5000 ಮಿಮೀ ಮಳೆಯಾಗುತ್ತದೆ. ಹೆಚ್ಚಿನ ಮಳೆಯ ಕಾರಣದಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿದೆ. ಪುತ್ತೂರು ತಾಲೂಕು ಒಂದರಲ್ಲಿಯೇ 1900 ಕಿಮೀ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ರಸ್ತೆ ಇದೆ. ಅದರಲ್ಲಿ ಕೇವಲ  36 ಕಿಮೀ ರಸ್ತೆ ಮಾತ್ರಾ ಹಾಳಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ. ಇದಕ್ಕೆ ಸುಮಾರು 301 ಲಕ್ಷ ರೂಪಾಯಿ ಅನುದಾನ ಅವಶ್ಯಕತೆ ಇರುವ ಬಗ್ಗೆ ಉತ್ತರದಲ್ಲಿ  ತಿಳಿಸಲಾಗಿದೆ. ಇದು ಸರಿಯಲ್ಲ, ಇನ್ನಷ್ಟು ರಸ್ತೆಗಳ ದುರಸ್ತಿ ಆಗಬೇಕಿದೆ. ಇಡೀ ರಸ್ತೆಯ ಅಭಿವೃದ್ಧಿಗೆ ಇಷ್ಟೇ ಅನುದಾನ ಸಾಕಾಗುವುದೋ ಎನ್ನುವುದು  ಪ್ರಶ್ನೆ. ಅಷ್ಟು ಮಾತ್ರವಲ್ಲ ಈ ಅನುದಾನಗಳನ್ನು ತಡವಾಗಿ ಬಿಡುಗಡೆ ಮಾಡುವುದರಿಂದ ದುರಸ್ತಿ ಮಾಡಲೂ ಸಾಧ್ಯವಾಗುತ್ತಿಲ್ಲ, ಅಕ್ಟೋಬರ್‌ , ನವೆಂಬರ್‌ ಅವಧಿಗೆ ಅನುದಾನಗಳು ಬಿಡುಗಡೆಯಾಗಬೇಕು ಎಂದು ಸಂಜೀವ ಮಟಂದೂರು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ ಎಸ್‌ ಈಶ್ವರಪ್ಪ, ಈ ಬಾರಿ ಮಳೆಯ ಕಾರಣದಿಂದ ರಸ್ತೆ ಹಾಳಾಗಿರುವುದು  ನಿಜ. ದ ಕ ಜಿಲ್ಲೆಯಲ್ಲಿ  ರಸ್ತೆ ಹಾನಿಯಾಗಿದೆ, ಎಷ್ಟು ಸಾಧ್ಯವೋ ಅಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅನೇಕ ಕಡೆ ಕಾಮಗಾರಿ ಶುರುವಾಗಿದೆ. ಇನ್ನೂ ಹೆಚ್ಚು ಹಣ ಬಿಡುಗಡೆಗೆ ಸೀಎಂ ಜೊತೆ ಮಾತುಕತೆ ನಡೆಸಲಾಗುತ್ತದೆ. ಈ ವರ್ಷ ಬಾಬ್ತು ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಆದಷ್ಟು ಬೇಗನೆ ಹಣ ಬಿಡುಗಡೆಗೆ ಕ್ರಮ  ಕೈಗೊಳ್ಳಲಾಗುತ್ತದೆ ಎಂದು  ಹೇಳಿದರು.

ಇದೇ ವೇಳೆ ಸಂಜೀವ ಮಟಂದೂರು ಅವರು ತಾಲೂಕು ಪಂಚಾಯತ್‌ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

32 minutes ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

23 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

23 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

24 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

1 day ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

2 days ago