Advertisement
ರಾಜ್ಯ

ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕ ಸಂಜೀವ ಮಟಂದೂರು |

Share

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸರಕಾರವನ್ನು  ಒತ್ತಾಯಿಸಿದ್ದಾರೆ.

ಸಂಜೀವ ಮಟಂದೂರು, ಶಾಸಕರು
ವಿಧಾನ ಮಂಡಲ ಅಧಿವೇಶನದಲ್ಲಿ  ಬುಧವಾರ ಪ್ರಶ್ನೆ ಸಂಖ್ಯೆ 212 ರಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ರಸ್ತೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ನೀಡಿದ ಉತ್ತರ ತೃಪ್ತಿದಾಯಕವಾಗದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ ಸಂಜೀವ ಮಟಂದೂರು ಅವರು, “ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ  ಸುಮಾರು 5000 ಮಿಮೀ ಮಳೆಯಾಗುತ್ತದೆ. ಹೆಚ್ಚಿನ ಮಳೆಯ ಕಾರಣದಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿದೆ. ಪುತ್ತೂರು ತಾಲೂಕು ಒಂದರಲ್ಲಿಯೇ 1900 ಕಿಮೀ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ರಸ್ತೆ ಇದೆ. ಅದರಲ್ಲಿ ಕೇವಲ  36 ಕಿಮೀ ರಸ್ತೆ ಮಾತ್ರಾ ಹಾಳಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ. ಇದಕ್ಕೆ ಸುಮಾರು 301 ಲಕ್ಷ ರೂಪಾಯಿ ಅನುದಾನ ಅವಶ್ಯಕತೆ ಇರುವ ಬಗ್ಗೆ ಉತ್ತರದಲ್ಲಿ  ತಿಳಿಸಲಾಗಿದೆ. ಇದು ಸರಿಯಲ್ಲ, ಇನ್ನಷ್ಟು ರಸ್ತೆಗಳ ದುರಸ್ತಿ ಆಗಬೇಕಿದೆ. ಇಡೀ ರಸ್ತೆಯ ಅಭಿವೃದ್ಧಿಗೆ ಇಷ್ಟೇ ಅನುದಾನ ಸಾಕಾಗುವುದೋ ಎನ್ನುವುದು  ಪ್ರಶ್ನೆ. ಅಷ್ಟು ಮಾತ್ರವಲ್ಲ ಈ ಅನುದಾನಗಳನ್ನು ತಡವಾಗಿ ಬಿಡುಗಡೆ ಮಾಡುವುದರಿಂದ ದುರಸ್ತಿ ಮಾಡಲೂ ಸಾಧ್ಯವಾಗುತ್ತಿಲ್ಲ, ಅಕ್ಟೋಬರ್‌ , ನವೆಂಬರ್‌ ಅವಧಿಗೆ ಅನುದಾನಗಳು ಬಿಡುಗಡೆಯಾಗಬೇಕು ಎಂದು ಸಂಜೀವ ಮಟಂದೂರು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ ಎಸ್‌ ಈಶ್ವರಪ್ಪ, ಈ ಬಾರಿ ಮಳೆಯ ಕಾರಣದಿಂದ ರಸ್ತೆ ಹಾಳಾಗಿರುವುದು  ನಿಜ. ದ ಕ ಜಿಲ್ಲೆಯಲ್ಲಿ  ರಸ್ತೆ ಹಾನಿಯಾಗಿದೆ, ಎಷ್ಟು ಸಾಧ್ಯವೋ ಅಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅನೇಕ ಕಡೆ ಕಾಮಗಾರಿ ಶುರುವಾಗಿದೆ. ಇನ್ನೂ ಹೆಚ್ಚು ಹಣ ಬಿಡುಗಡೆಗೆ ಸೀಎಂ ಜೊತೆ ಮಾತುಕತೆ ನಡೆಸಲಾಗುತ್ತದೆ. ಈ ವರ್ಷ ಬಾಬ್ತು ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಆದಷ್ಟು ಬೇಗನೆ ಹಣ ಬಿಡುಗಡೆಗೆ ಕ್ರಮ  ಕೈಗೊಳ್ಳಲಾಗುತ್ತದೆ ಎಂದು  ಹೇಳಿದರು.

ಇದೇ ವೇಳೆ ಸಂಜೀವ ಮಟಂದೂರು ಅವರು ತಾಲೂಕು ಪಂಚಾಯತ್‌ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

8 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago