ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ, ಈ ಬಾರಿ ಮಳೆಯ ಕಾರಣದಿಂದ ರಸ್ತೆ ಹಾಳಾಗಿರುವುದು ನಿಜ. ದ ಕ ಜಿಲ್ಲೆಯಲ್ಲಿ ರಸ್ತೆ ಹಾನಿಯಾಗಿದೆ, ಎಷ್ಟು ಸಾಧ್ಯವೋ ಅಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅನೇಕ ಕಡೆ ಕಾಮಗಾರಿ ಶುರುವಾಗಿದೆ. ಇನ್ನೂ ಹೆಚ್ಚು ಹಣ ಬಿಡುಗಡೆಗೆ ಸೀಎಂ ಜೊತೆ ಮಾತುಕತೆ ನಡೆಸಲಾಗುತ್ತದೆ. ಈ ವರ್ಷ ಬಾಬ್ತು ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಆದಷ್ಟು ಬೇಗನೆ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಸಂಜೀವ ಮಟಂದೂರು ಅವರು ತಾಲೂಕು ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…