Advertisement
ರಾಜ್ಯ

ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕ ಸಂಜೀವ ಮಟಂದೂರು |

Share

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸರಕಾರವನ್ನು  ಒತ್ತಾಯಿಸಿದ್ದಾರೆ.

ಸಂಜೀವ ಮಟಂದೂರು, ಶಾಸಕರು
ವಿಧಾನ ಮಂಡಲ ಅಧಿವೇಶನದಲ್ಲಿ  ಬುಧವಾರ ಪ್ರಶ್ನೆ ಸಂಖ್ಯೆ 212 ರಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ರಸ್ತೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ನೀಡಿದ ಉತ್ತರ ತೃಪ್ತಿದಾಯಕವಾಗದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ ಸಂಜೀವ ಮಟಂದೂರು ಅವರು, “ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ  ಸುಮಾರು 5000 ಮಿಮೀ ಮಳೆಯಾಗುತ್ತದೆ. ಹೆಚ್ಚಿನ ಮಳೆಯ ಕಾರಣದಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿದೆ. ಪುತ್ತೂರು ತಾಲೂಕು ಒಂದರಲ್ಲಿಯೇ 1900 ಕಿಮೀ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ರಸ್ತೆ ಇದೆ. ಅದರಲ್ಲಿ ಕೇವಲ  36 ಕಿಮೀ ರಸ್ತೆ ಮಾತ್ರಾ ಹಾಳಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ. ಇದಕ್ಕೆ ಸುಮಾರು 301 ಲಕ್ಷ ರೂಪಾಯಿ ಅನುದಾನ ಅವಶ್ಯಕತೆ ಇರುವ ಬಗ್ಗೆ ಉತ್ತರದಲ್ಲಿ  ತಿಳಿಸಲಾಗಿದೆ. ಇದು ಸರಿಯಲ್ಲ, ಇನ್ನಷ್ಟು ರಸ್ತೆಗಳ ದುರಸ್ತಿ ಆಗಬೇಕಿದೆ. ಇಡೀ ರಸ್ತೆಯ ಅಭಿವೃದ್ಧಿಗೆ ಇಷ್ಟೇ ಅನುದಾನ ಸಾಕಾಗುವುದೋ ಎನ್ನುವುದು  ಪ್ರಶ್ನೆ. ಅಷ್ಟು ಮಾತ್ರವಲ್ಲ ಈ ಅನುದಾನಗಳನ್ನು ತಡವಾಗಿ ಬಿಡುಗಡೆ ಮಾಡುವುದರಿಂದ ದುರಸ್ತಿ ಮಾಡಲೂ ಸಾಧ್ಯವಾಗುತ್ತಿಲ್ಲ, ಅಕ್ಟೋಬರ್‌ , ನವೆಂಬರ್‌ ಅವಧಿಗೆ ಅನುದಾನಗಳು ಬಿಡುಗಡೆಯಾಗಬೇಕು ಎಂದು ಸಂಜೀವ ಮಟಂದೂರು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ ಎಸ್‌ ಈಶ್ವರಪ್ಪ, ಈ ಬಾರಿ ಮಳೆಯ ಕಾರಣದಿಂದ ರಸ್ತೆ ಹಾಳಾಗಿರುವುದು  ನಿಜ. ದ ಕ ಜಿಲ್ಲೆಯಲ್ಲಿ  ರಸ್ತೆ ಹಾನಿಯಾಗಿದೆ, ಎಷ್ಟು ಸಾಧ್ಯವೋ ಅಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅನೇಕ ಕಡೆ ಕಾಮಗಾರಿ ಶುರುವಾಗಿದೆ. ಇನ್ನೂ ಹೆಚ್ಚು ಹಣ ಬಿಡುಗಡೆಗೆ ಸೀಎಂ ಜೊತೆ ಮಾತುಕತೆ ನಡೆಸಲಾಗುತ್ತದೆ. ಈ ವರ್ಷ ಬಾಬ್ತು ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಆದಷ್ಟು ಬೇಗನೆ ಹಣ ಬಿಡುಗಡೆಗೆ ಕ್ರಮ  ಕೈಗೊಳ್ಳಲಾಗುತ್ತದೆ ಎಂದು  ಹೇಳಿದರು.

ಇದೇ ವೇಳೆ ಸಂಜೀವ ಮಟಂದೂರು ಅವರು ತಾಲೂಕು ಪಂಚಾಯತ್‌ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

15 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

22 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago