Advertisement
City mirror

ಸಲಹೆ, ಸೂಚನೆ ಹಾಗೂ ಚಿಕಿತ್ಸೆಗೆ ಇ-ಸಂಜೀವಿನಿ ಆ್ಯಪ್ ಬಳಸಿ ಜಿಲ್ಲಾ ಉಸ್ತುವಾರಿ ಸಚಿವ – ಕೋಟಾ ಶ್ರೀನಿವಾಸ ಪೂಜಾರಿ

Share
ಸಾಮಾನ್ಯ ಕೆಮ್ಮು, ನೆಗಡಿ, ಜ್ವರ ಅಲ್ಲದೇ ಇತರ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಕುಳಿತು ಸಾರ್ವಜನಿಕರು ವೈದ್ಯರಿಂದ ಸಲಹೆ ಪಡೆಯಲು ಸರ್ಕಾರ ಇ-ಸಂಜೀವಿನಿ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಮಂಗಳೂರು ಜಿಲ್ಲೆಯಲ್ಲಿ 24 ತಜ್ಞ ವೈದ್ಯರು ಈಗಾಗಲೇ ಆ್ಯಪ್ ನಲ್ಲಿ ಸೇವೆ ನೀಡುತ್ತಿದ್ದಾರೆ. ಹೊರೆ ಜಿಲ್ಲೆಯ 100 ಕ್ಕೂ ಅಧಿಕ ರೋಗಿಗಳಿಗೆ ವಿಡೀಯೊ ಮೂಲಕ ಸಂಪರ್ಕಿಸಿ ಚಿಕಿತ್ಸೆ ನೀಡಲಾಗಿದೆ. ಈ ಆ್ಯಪ್‍ನಲ್ಲಿ ಕರ್ನಾಟಕದಲ್ಲಿ ಇರುವ ಉತ್ತಮ ವೈದ್ಯ ತಂಡವು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಯಾವುದೇ ಜಿಲ್ಲೆಯಲ್ಲಿ ಇವರು ವೈದ್ಯರನ್ನು ರೋಗಿ ಸಂಪರ್ಕಿಸಬಹುದಾಗಿದೆ. ವೈದ್ಯರನ್ನು ಸಂಪರ್ಕಿಸಲು ಮೊಬೈಲ್‍ನ ಪ್ಲೇ ಸ್ಟೋರ್ನಲ್ಲಿ ಇ-ಸಂಜೀವಿನಿ ಒ.ಪಿ.ಡಿ. ಎಂಬ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು ಅಥವಾ ಗೂಗಲ್ ನಲ್ಲಿ ಇ-ಸಂಜೀವಿನಿ ಒ.ಪಿ.ಡಿ. ಎಂದು ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು. ವೆಬ್ ವಿಡಿಯೊ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರಿಗೆ ಆರೋಗ್ಯ ಸಮಸ್ಯೆ ಕುರಿತು ವಿವರಿಸಿದರೆ ಚಿಕಿತ್ಸೆ ಬರೆದು ಕೊಡಲಿದ್ದಾರೆ. ಕೋವಿಡೇತರ ಆರೋಗ್ಯದ ತೊಂದರೆಗಳಿಗೆ ಮನೆಯಲ್ಲಿ ಕುಳಿತು ಚಿಕಿತ್ಸೆ ಪಡೆಯಲು ಸಹಕಾರಿಯಾಗಲ್ಲಿದೆ.

ಆ್ಯಪ್‍ನಲ್ಲಿ ರೋಗಿಯ ರಿಜಿಸ್ಟ್ರೇಷನ್ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸಿದರೆ ಒಟಿಪಿ ಸಂಖ್ಯೆ ಬರಲಿದೆ. ಈ ಒಟಿಪಿ ನಮೂದಿಸಿದರೆ, ರಿಜಿಸ್ಟ್ರೇಷನ್ ಅಪ್ಲಿಕೇಷನ್ ತೆರೆದುಕೊಳ್ಳುತ್ತದೆ. ಅದರಲ್ಲಿ ರೋಗಿಯ ಹೆಸರು, ಲಿಂಗ, ವಯಸ್ಸು, ಮೊಬೈಲ್ ಸಂಖ್ಯೆ ಹಾಗೂ ವಿಳಾಸ ನಮೂದಿಸಿ ಲಾಗಿನ್ ಆಗಬೇಕು. ಈ ವೇಳೆ ಟೋಕನ್ ನಂಬರ್ ದೊರೆಯಲಿದೆ. ಟೋಕನ್ ನಂಬರ್ ನೀಡಿ, ವೈದ್ಯರನ್ನು ವಿಡಿಯೊ ಕಾಲ್ ಮೂಲಕ ಸಂಪರ್ಕಿಸಬಹುದು. ಈ ಸೇವೆ ನಿತ್ಯ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಲಭ್ಯವಿರುತ್ತದೆ. ಒಮ್ಮೆ ನೋಂದಣಿಯಾದರೆ ಮತ್ತೊಮ್ಮೆ ಮಾಡಿಕೊಳ್ಳುವ ಅಗತ್ಯವಿರುವುದಿಲ್ಲ.

ಸಾರ್ವಜನಿಕರು ಆರೋಗ್ಯ ದೃಷ್ಠಿಯಿಂದ ಸರ್ಕಾರ ಉತ್ತಮ ಚಿಕಿತ್ಸೆಯನ್ನು ಬೆರಳ ತುದಿಯಲ್ಲಿಯೇ ಸುಲಭವಾಗಿ ಪಡೆಯಬೇಕು ಎಂಬ ಉದ್ದೇಶದಿಂದ ಇ-ಸಂಜೀವಿನಿ ಆ್ಯಪ್ ಮೂಲಕ ಅನ್‍ಲೈನ್‍ನಲ್ಲಿ ಚಿಕಿತ್ಸೆ ನೀಡಲು ಮುಂದಾಗಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

13 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

20 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

20 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago