ಉಪ್ಪುಂದದಲ್ಲಿ ಸಂಜೀವಿನಿ ಸಂತೆ : ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ

January 19, 2026
7:14 AM

ಉಡುಪಿ ಜಿಲ್ಲೆಯ ಉಪ್ಪುಂದ ಗ್ರಾಮದಲ್ಲಿ ಸಂಜೀವಿನಿ ಸಂತೆ ನಡೆಯಿತು. ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಸಂತೆ ಆಯೋಜಿಸಲಾಗಿತ್ತು.

ಸಂತೆಯಲ್ಲಿ ಗ್ರಾಮೀಣ ಮಹಿಳೆಯರು ತಯಾರಿಸಿದ ಮೀನಿನ ಉತ್ಪನ್ನಗಳು, ಸಾಂಬಾರ ಪುಡಿ, ಕಷಾಯ ಪುಡಿ, ಹಪ್ಪಳ, ರೊಟ್ಟಿ, ಚಪಾತಿ, ಎಣ್ಣೆ, ಮಣ್ಣಿನ ದೀಪಗಳು, ಮನೆಯಲ್ಲಿ ತಯಾರಿಸಿದ ಸಿದ್ಧ ಉಡುಪುಗಳು ಸೇರಿದಂತೆ ವಿವಿಧ ಮನೆಬಳಕೆ ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇಸೀಯ ಮತ್ತು ಶುದ್ಧ ಉತ್ಪನ್ನಗಳಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಲಭಿಸಿತು.

ಇದೇ ವೇಳೆ ಮಹಿಳೆಯರು ಹಾಗೂ ಯುವಜನರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಗ್ರಾಹಕ ಚಂದ್ರಪೂಜಾರಿ ಮಾತನಾಡಿ, “ಇಲ್ಲಿನ ವಸ್ತುಗಳು ಶುದ್ಧ ಹಾಗೂ ದೇಸೀಯವಾಗಿರುವುದರಿಂದ ರುಚಿಕರವಾಗಿವೆ. ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಇಂತಹ ಸಂತೆಯು ಅತ್ಯಂತ ಸಹಕಾರಿಯಾಗಿದೆ” ಎಂದರು.

ಸಂಜೀವಿನಿ ಸಂಘದ ರೇಖಾ , ಈ ಸಂತೆಯಿಂದ ಗ್ರಾಮೀಣ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ದೊರಕಿದ್ದು, ಉತ್ತಮ ವ್ಯಾಪಾರ ಹಾಗೂ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇಂತಹ ಸಂತೆಯು ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಚಂದ್ರ  ಹೇಳುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror