Advertisement
MIRROR FOCUS

ಉಪ್ಪುಂದದಲ್ಲಿ ಸಂಜೀವಿನಿ ಸಂತೆ : ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ

Share

ಉಡುಪಿ ಜಿಲ್ಲೆಯ ಉಪ್ಪುಂದ ಗ್ರಾಮದಲ್ಲಿ ಸಂಜೀವಿನಿ ಸಂತೆ ನಡೆಯಿತು. ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಸಂತೆ ಆಯೋಜಿಸಲಾಗಿತ್ತು.

ಸಂತೆಯಲ್ಲಿ ಗ್ರಾಮೀಣ ಮಹಿಳೆಯರು ತಯಾರಿಸಿದ ಮೀನಿನ ಉತ್ಪನ್ನಗಳು, ಸಾಂಬಾರ ಪುಡಿ, ಕಷಾಯ ಪುಡಿ, ಹಪ್ಪಳ, ರೊಟ್ಟಿ, ಚಪಾತಿ, ಎಣ್ಣೆ, ಮಣ್ಣಿನ ದೀಪಗಳು, ಮನೆಯಲ್ಲಿ ತಯಾರಿಸಿದ ಸಿದ್ಧ ಉಡುಪುಗಳು ಸೇರಿದಂತೆ ವಿವಿಧ ಮನೆಬಳಕೆ ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇಸೀಯ ಮತ್ತು ಶುದ್ಧ ಉತ್ಪನ್ನಗಳಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಲಭಿಸಿತು.

ಇದೇ ವೇಳೆ ಮಹಿಳೆಯರು ಹಾಗೂ ಯುವಜನರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಗ್ರಾಹಕ ಚಂದ್ರಪೂಜಾರಿ ಮಾತನಾಡಿ, “ಇಲ್ಲಿನ ವಸ್ತುಗಳು ಶುದ್ಧ ಹಾಗೂ ದೇಸೀಯವಾಗಿರುವುದರಿಂದ ರುಚಿಕರವಾಗಿವೆ. ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಇಂತಹ ಸಂತೆಯು ಅತ್ಯಂತ ಸಹಕಾರಿಯಾಗಿದೆ” ಎಂದರು.

ಸಂಜೀವಿನಿ ಸಂಘದ ರೇಖಾ , ಈ ಸಂತೆಯಿಂದ ಗ್ರಾಮೀಣ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ದೊರಕಿದ್ದು, ಉತ್ತಮ ವ್ಯಾಪಾರ ಹಾಗೂ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇಂತಹ ಸಂತೆಯು ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಚಂದ್ರ  ಹೇಳುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

14 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

20 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago