ಉಡುಪಿ ಜಿಲ್ಲೆಯ ಉಪ್ಪುಂದ ಗ್ರಾಮದಲ್ಲಿ ಸಂಜೀವಿನಿ ಸಂತೆ ನಡೆಯಿತು. ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಸಂತೆ ಆಯೋಜಿಸಲಾಗಿತ್ತು.
ಸಂತೆಯಲ್ಲಿ ಗ್ರಾಮೀಣ ಮಹಿಳೆಯರು ತಯಾರಿಸಿದ ಮೀನಿನ ಉತ್ಪನ್ನಗಳು, ಸಾಂಬಾರ ಪುಡಿ, ಕಷಾಯ ಪುಡಿ, ಹಪ್ಪಳ, ರೊಟ್ಟಿ, ಚಪಾತಿ, ಎಣ್ಣೆ, ಮಣ್ಣಿನ ದೀಪಗಳು, ಮನೆಯಲ್ಲಿ ತಯಾರಿಸಿದ ಸಿದ್ಧ ಉಡುಪುಗಳು ಸೇರಿದಂತೆ ವಿವಿಧ ಮನೆಬಳಕೆ ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇಸೀಯ ಮತ್ತು ಶುದ್ಧ ಉತ್ಪನ್ನಗಳಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಲಭಿಸಿತು.
ಇದೇ ವೇಳೆ ಮಹಿಳೆಯರು ಹಾಗೂ ಯುವಜನರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
ಗ್ರಾಹಕ ಚಂದ್ರಪೂಜಾರಿ ಮಾತನಾಡಿ, “ಇಲ್ಲಿನ ವಸ್ತುಗಳು ಶುದ್ಧ ಹಾಗೂ ದೇಸೀಯವಾಗಿರುವುದರಿಂದ ರುಚಿಕರವಾಗಿವೆ. ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಇಂತಹ ಸಂತೆಯು ಅತ್ಯಂತ ಸಹಕಾರಿಯಾಗಿದೆ” ಎಂದರು.
ಸಂಜೀವಿನಿ ಸಂಘದ ರೇಖಾ , ಈ ಸಂತೆಯಿಂದ ಗ್ರಾಮೀಣ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ದೊರಕಿದ್ದು, ಉತ್ತಮ ವ್ಯಾಪಾರ ಹಾಗೂ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇಂತಹ ಸಂತೆಯು ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಚಂದ್ರ ಹೇಳುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…