Advertisement
MIRROR FOCUS

ಉಪ್ಪುಂದದಲ್ಲಿ ಸಂಜೀವಿನಿ ಸಂತೆ : ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ

Share

ಉಡುಪಿ ಜಿಲ್ಲೆಯ ಉಪ್ಪುಂದ ಗ್ರಾಮದಲ್ಲಿ ಸಂಜೀವಿನಿ ಸಂತೆ ನಡೆಯಿತು. ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಸಂತೆ ಆಯೋಜಿಸಲಾಗಿತ್ತು.

ಸಂತೆಯಲ್ಲಿ ಗ್ರಾಮೀಣ ಮಹಿಳೆಯರು ತಯಾರಿಸಿದ ಮೀನಿನ ಉತ್ಪನ್ನಗಳು, ಸಾಂಬಾರ ಪುಡಿ, ಕಷಾಯ ಪುಡಿ, ಹಪ್ಪಳ, ರೊಟ್ಟಿ, ಚಪಾತಿ, ಎಣ್ಣೆ, ಮಣ್ಣಿನ ದೀಪಗಳು, ಮನೆಯಲ್ಲಿ ತಯಾರಿಸಿದ ಸಿದ್ಧ ಉಡುಪುಗಳು ಸೇರಿದಂತೆ ವಿವಿಧ ಮನೆಬಳಕೆ ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇಸೀಯ ಮತ್ತು ಶುದ್ಧ ಉತ್ಪನ್ನಗಳಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಲಭಿಸಿತು.

ಇದೇ ವೇಳೆ ಮಹಿಳೆಯರು ಹಾಗೂ ಯುವಜನರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಗ್ರಾಹಕ ಚಂದ್ರಪೂಜಾರಿ ಮಾತನಾಡಿ, “ಇಲ್ಲಿನ ವಸ್ತುಗಳು ಶುದ್ಧ ಹಾಗೂ ದೇಸೀಯವಾಗಿರುವುದರಿಂದ ರುಚಿಕರವಾಗಿವೆ. ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಇಂತಹ ಸಂತೆಯು ಅತ್ಯಂತ ಸಹಕಾರಿಯಾಗಿದೆ” ಎಂದರು.

ಸಂಜೀವಿನಿ ಸಂಘದ ರೇಖಾ , ಈ ಸಂತೆಯಿಂದ ಗ್ರಾಮೀಣ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ದೊರಕಿದ್ದು, ಉತ್ತಮ ವ್ಯಾಪಾರ ಹಾಗೂ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇಂತಹ ಸಂತೆಯು ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಚಂದ್ರ  ಹೇಳುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

5 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

8 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

14 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

20 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

21 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago