ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.
ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.
ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…