ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.
ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.
ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…