ಅನುಕ್ರಮ

ಸಂಕ್ರಾಂತಿ ಶುಭಾಶಯ | ಸೂರ್ಯನ ಪಥ ಬದಲಾವಣೆ | ಕೃಷಿಯಲ್ಲೂ ಬದಲಾವಣೆ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.

Advertisement
Advertisement
ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ? ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು‌ ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಬದುಕಿನ ಏಕತಾನತೆಗೆ ಹಬ್ಬಗಳು ಒಂದು ಬದಲಾವಣೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು.

ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.

ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…

8 hours ago

ಮನ ಗೆಲ್ಲುವ ಮಾವಿನ ಹಣ್ಣುಗಳು

ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…

8 hours ago

ಕೃಷಿ-ಮಾರುಕಟ್ಟೆ | ಚಾಲಿ ಅಡಿಕೆಯ ಉಪಯೋಗದ ವಿಧಾನಗಳು

ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…

9 hours ago

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

9 hours ago