Advertisement
ಅನುಕ್ರಮ

ಸಂಕ್ರಾಂತಿ ಶುಭಾಶಯ | ಸೂರ್ಯನ ಪಥ ಬದಲಾವಣೆ | ಕೃಷಿಯಲ್ಲೂ ಬದಲಾವಣೆ ಆರಂಭ |

Share

ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.

ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ? ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು‌ ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಬದುಕಿನ ಏಕತಾನತೆಗೆ ಹಬ್ಬಗಳು ಒಂದು ಬದಲಾವಣೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು.

ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.

ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

5 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

5 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago