ಅನುಕ್ರಮ

ಸಂಕ್ರಾಂತಿ ಶುಭಾಶಯ | ಸೂರ್ಯನ ಪಥ ಬದಲಾವಣೆ | ಕೃಷಿಯಲ್ಲೂ ಬದಲಾವಣೆ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.

Advertisement
ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ? ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು‌ ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಬದುಕಿನ ಏಕತಾನತೆಗೆ ಹಬ್ಬಗಳು ಒಂದು ಬದಲಾವಣೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು.
Advertisement

ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.

ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನಿಜದ ಹಣವ ಕಟ್ಟಿದರೆ ದಕ್ಕೀತೇ ಕನಸಿನ ಹಣದ ಬುಟ್ಟಿ

ಪ್ರಧಾನಿ ನರೇಂದ್ರ ಮೋದಿಯವರು, ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್, ಉದ್ಯಮಿ ಮುಖೇಶ್…

1 hour ago

ಪಂಜದಲ್ಲಿ ಜನರೇಟರ್ ಕ್ಯಾಂಪ್ | ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್…

1 hour ago

ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ

ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…

1 hour ago

ಮುಂದುವರಿದ ಮಳೆ ಆತಂಕ | ರಾಜ್ಯದಲ್ಲೂ ನಿರಂತರ ಮಳೆ | ಜನಜೀವನ ಅಸ್ತವ್ಯಸ್ತ

ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…

1 hour ago

ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…

2 hours ago

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…

6 hours ago