Advertisement
ಅಂಕಣ

ಸಂಕ್ರಾಂತಿ ಶುಭಾಶಯ | ಸೂರ್ಯನ ಪಥ ಬದಲಾವಣೆ | ಕೃಷಿಯಲ್ಲೂ ಬದಲಾವಣೆ ಆರಂಭ |

Share

ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.

Advertisement
Advertisement
Advertisement
Advertisement
ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ? ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು‌ ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಬದುಕಿನ ಏಕತಾನತೆಗೆ ಹಬ್ಬಗಳು ಒಂದು ಬದಲಾವಣೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು.
Advertisement

ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.

ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

1 day ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago