Advertisement
ಅನುಕ್ರಮ

ಸಂಕ್ರಾಂತಿ ಶುಭಾಶಯ | ಸೂರ್ಯನ ಪಥ ಬದಲಾವಣೆ | ಕೃಷಿಯಲ್ಲೂ ಬದಲಾವಣೆ ಆರಂಭ |

Share

ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.

ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ? ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು‌ ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಬದುಕಿನ ಏಕತಾನತೆಗೆ ಹಬ್ಬಗಳು ಒಂದು ಬದಲಾವಣೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು.

ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.

ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

3 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

4 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

10 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

16 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago