ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.
ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.
ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…