ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.
ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ? ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಬದುಕಿನ ಏಕತಾನತೆಗೆ ಹಬ್ಬಗಳು ಒಂದು ಬದಲಾವಣೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು.ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.
ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…