ಮಾವಿನ ಮರಗಳು ಫಲ ಬಿಟ್ಟಿವೆ, ಕೆಲವು ಮರಗಳು ಚಿಗುರಿನಿಂದ ಕಂಗೊಳಿಸುತ್ತಿವೆ. ಚಳಿಯೂ ತನ್ನ ಇರುವಿಕೆಯನ್ನು ಪ್ರಚುರ ಪಡಿಸುತ್ತದೆ. ಹಕ್ಕಿಗಳ ಕಿಲಕಿಲ ಕಲರವ ಕಿವಿ ತುಂಬುತ್ತಿದೆ. ಪ್ರಕೃತಿಯ ಬದಲಾವಣೆ ಸಂಕ್ರಾಂತಿಯ ಸಂಭ್ರಮಕ್ಕೆ ಇಂಬು ಕೊಡುವಂತೆ ಕಾಣುತ್ತಿದೆ.
ಕ್ಯಾಲೆಂಡರ್ ನ ಆರಂಭದ ತಿಂಗಳಲ್ಲಿ ಬರುವ ಮೊದಲ ಹಬ್ಬವೇ ಸಂಕ್ರಾಂತಿಯಾಗಿದೆ. ಬೆಳೆ ಕೈಸೇರುವ ಸಂಧರ್ಭದಲ್ಲಿ ಯೇ ಈ ಹಬ್ಬ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಅವಕಾಶವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.
ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು. ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಸಂಕ್ರಾಂತಿ ಹಬ್ಬದ ವಿಶೇಷತೆಯಾಗಿದೆ. ಸೂರ್ಯದೇವನ ಪಥ ಬದಲಾವಣೆ ಪ್ರಕೃತಿಯಲ್ಲಿ ಬದಲಾವಣೆಯನ್ನು ತರುತ್ತದೆ. ಅದೇ ರೀತಿ ಮನು ಕುಲದ ಆರೋಗ್ಯ ವೃದ್ಧಿಗೂ ಕಾರಣವಾಗಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…