Advertisement
ಶಿಕ್ಷಣ

ಸುಳ್ಯ ವಿದ್ಯಾಮಾತಾ ಅಕಾಡೆಮಿಗೆ ಸಂತೋಷ್ ಹೆಗ್ಡೆ ಭೇಟಿ | ಪದವಿ ಪಡೆದ ಬಳಿಕ ಉನ್ನತ ಶಿಕ್ಷಣ, ತಾಂತ್ರಿಕ ಶಿಕ್ಷಣ ಪಡೆಯುವ ಅಗತ್ಯ ಇದೆ |

Share

ಸಮಾಜದಲ್ಲಿ ಭಾವನೆಗಳನ್ನು ಬದಲಾಯಿಸುವ ಕೆಲಸ ಇಂದು ನಡೆಸಬೇಕಿದೆ. ಆಗ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹೆಚ್ಚು ಮುಂದುವರಿಯಬೇಕು, ಪದವಿ ಬಳಿಕ ತಾಂತ್ರಿಕ ಶಿಕ್ಷಣದ ಕಡೆಗೂ ಗಮನ ನೀಡಬೇಕು ಎಂದು  ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಹೇಳಿದರು.

ಅವರು  ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ ನೆರವೇರಿಸಿ  ಮಾತನಾಡಿದರು. ಪ್ರತಿಯೊಬ್ಬರು ಇರುವುದರಲ್ಲಿ ತೃಪ್ತಿ ಹೊಂದುವ ಗುಣ ಅಳವಡಿಸಿಕೊಂಡರೆ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಸಾಧ್ಯ ,ಇನ್ನೊಬ್ಬರ ಜೇಬಿಗೆ ಕೈಹಾಕದೇ, ಹಣಕ್ಕೆ ಆಸೆ ಪಡದೆ ಬದುಕಿದರೆ ಶ್ರೀಮಂತಿಕೆ ಇಲ್ಲದೆಯೂ ಸಂತೋಷದಿಂದ ಬದುಕಲು ಸಾಧ್ಯವಿದೆ ಎಂದರು. ಭ್ರಷ್ಟಾಚಾರ ಇದೇ ರೀತಿ ಮುಂದುವರಿದರೆ ಜನರಲ್ಲಿ ನಿರಾಶೆ, ಆಕ್ರೋಶ ಹೆಚ್ಚಾಗವಹುದು, ಇದಕ್ಕಾಗಿ ಈಗಲೇ ಎಲ್ಲರೂ ಎಚ್ಚೆತ್ತುಗೊಳ್ಳಬೇಕು ಎಂದು ಸಂತೋಷ್‌ ಹೆಗ್ಡೆ ಹೇಳಿದರು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ಇಂದು ಸ್ಕೋಪ್ ಇರುವುದು ಯಾವುದೇ ಕೋರ್ಸ್‌ಗಳಿಗೆ ಅಲ್ಲಾ, ಸ್ಕೋಪ್ ಇರುವುದು ವ್ಯಕ್ತಿಗಳಿಗೆ, ಉತ್ತಮ ವ್ಯಕ್ತಿತ್ವ, ಪರಿಸ್ಥಿತಿಯನ್ನು ನಿಭಾಯಿಸುವ ಚಾಕಚಕ್ಯತೆ ಇದ್ದರೆ ಪ್ರತಿ ವ್ಯಕ್ತಿಯೂ ಶೋಭಿಸಲು ಸಾಧ್ಯ ಎಂದರು.

ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್ , ಸುಳ್ಯ ಟಿಎಪಿಸಿಎಂಎಸ್‌ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿದ್ದರು.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗೇಶ್ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ವಂದಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೊಂದಿಗೆ ಸಂತೋಷ್ ಹೆಗ್ಡೆಯವರು ಸಂವಾದ ನಡೆಸಿ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

1 hour ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

2 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

19 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago