ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿರುತ್ತದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7) ರ ಕೆರೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಕೆರೆಯ ಸರ್ವೆ ಕಾರ್ಯ ನಡೆಸಿ 21.68 ಗುಂಟೆ ಶೆಡ್ ಖಾಲಿ ಜಾಗ ಹಾಗೂ ರಸ್ತೆಯಿಂದ ಆಕ್ರಮಿತವಾಗಿದ್ದ ಪ್ರದೇಶವು ಒತ್ತುವರಿಯಾಗಿರುವುದಾಗಿ ತಿಳಿಸಿರುತ್ತಾರೆ. ಮುಂದುವರಿದು, ಕೆರೆಗಳು ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರುಗಳು 21.68 ಗುಂಟೆ ಪ್ರದೇಶದ ಒತ್ತುವರಿಯನ್ನು ತೆರವುಗೊಳಿಸಿ ಈ ಪ್ರದೇಶಕ್ಕೆ ತಂತಿ ಬೇಲಿಯನ್ನು ಅಳವಡಿಸಲಾಗಿರುತ್ತದೆ. ಈ ಒತ್ತುವರಿ ಪ್ರದೇಶದ ಮಾರುಕಟ್ಟೆ ಮೌಲ್ಯವು ಸುಮಾರು 20 ಕೋಟಿಗಳಾಗಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…