ಜನಾಕರ್ಷಿಸುತ್ತಿರುವ ಮಂಗಳೂರು ಸರಸ್ ಮೇಳ | ನಾಳೆ ಕೊನೆಯ ಅವಕಾಶ – ಮಹಿಳೆಯರ ಕೈಚಳಕಕ್ಕೆ ಭಾರೀ ಮೆಚ್ಚುಗೆ

February 27, 2026
6:13 AM

ಮಂಗಳೂರು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರಪಾಲಿಕೆ ಆಶ್ರಯದಲ್ಲಿ ಆಯೋಜಿಸಿರುವ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ – ‘ಸರಸ್ ಮೇಳ’ ನೋಡುಗರ ಗಮನ ಸೆಳೆಯುತ್ತಿದೆ.

ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳ ಸ್ವಸಹಾಯ ಗುಂಪಿನ ಮಹಿಳೆಯರ ಕೌಶಲ್ಯಪೂರ್ಣ ಕೈಚಳಕವನ್ನು ಕಾಣಬಹುದು. ಪ್ರತಿಯೊಂದು ಮಳಿಗೆಯಲ್ಲೂ ವಿಶಿಷ್ಟವಾದ ವಸ್ತುಗಳೊಂದಿಗೆ ಕರಕುಶಲತೆಯ ನೈಪುಣ್ಯ ಮೆರೆದಿದೆ.

ಆಕರ್ಷಕ ಬಣ್ಣಗಳಿಂದ ಮಿಂಚುವ ಚನ್ನಪಟ್ಟಣದ ಗೊಂಬೆಗಳು, ಸೌಂದರ್ಯ ವಸ್ತುಗಳು, ಅಸ್ಸಾಂ, ತೆಲಂಗಾಣ, ಆಂಧ್ರಪ್ರದೇಶದ ಸೀರೆಗಳು, ಕೈಮಗ್ಗ ಸೀರೆಗಳು, ಸಿರಿಧಾನ್ಯ ಉತ್ಪನ್ನಗಳು, ಯುವತಿಯರ ಗಮನ ಸೆಳೆಯುವ ಕಿವಿಯೋಲೆಗಳು, ಮಣಿಸರಗಳು, ಖಾದಿ ಉತ್ಪನ್ನಗಳು, ಕೃತಕ ಆಭರಣಗಳು, ಮಡಿಕೆಗಳು ಪ್ರದರ್ಶನ ಮತ್ತು ಮಾರಾಟಕ್ಕಿಡಲಾಗಿದೆ.

ಇದೇ ವೇಳೆ ಖಾರ ತಿಂಡಿತಿನಿಸುಗಳು, ಕೇರಳದ ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಉತ್ತರ ಕರ್ನಾಟಕದ ಚಟ್ನಿ ಪುಡಿ, ಖಾರದ ಪುಡಿ, ಸಾಂಬಾರು ಮಸಾಲೆ ಪದಾರ್ಥಗಳು, ಗ್ರಾಮೀಣ ಮಹಿಳೆಯರ ಕೈಯಿಂದ ತಯಾರಿಸಲ್ಪಟ್ಟ ವಿಭಿನ್ನ ವಿನ್ಯಾಸದ ಬ್ಯಾಗ್‌ಗಳು, ಮನೆಯ ಅಲಂಕಾರ ಹೆಚ್ಚಿಸುವ ಬಣ್ಣದ ಹೂದಾನಿಗಳು ಸೇರಿದಂತೆ ವಿವಿಧ ರಾಜ್ಯಗಳ ವಸ್ತುಗಳು ಕೈಗೆಟುಕುವ ದರದಲ್ಲಿ ಲಭ್ಯವಿವೆ.

ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕುಟುಂಬದ ಆದಾಯ ಹೆಚ್ಚಿಸಲು, ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಹಾಗೂ ಉತ್ತಮ ಲಾಭ ಗಳಿಸಲು ಇಂತಹ ಮಾರಾಟ ಮೇಳಗಳು ಸಹಕಾರಿಯಾಗಿವೆ. ಮೇಳದಲ್ಲಿ ಹೆಚ್ಚಿನ ಸಂಖ್ಯೆಯ ಮಳಿಗೆಗಳಿದ್ದು, ಫುಡ್ ಕೋರ್ಟ್‌ನಲ್ಲಿ 30ಕ್ಕೂ ಅಧಿಕ ಮಳಿಗೆಗಳಿವೆ. ಕರಾವಳಿ ತಿನಿಸುಗಳು, ನೀರುದೋಸೆ, ಚಿಕನ್ ಸುಕ್ಕ, ಮೀನು ಖಾದ್ಯಗಳು, ಚುರುಮುರಿ, ರಾಗಿಮುದ್ದೆ, ಚಿಕನ್ ಬಿರಿಯಾನಿ, ಜ್ಯೂಸ್ ಸೇರಿದಂತೆ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸರಸ್ ಮೇಳ ಫೆಬ್ರವರಿ 28 ರವರೆಗೆ ನಡೆಯಲಿದ್ದು, ನಾಳೆ ಕೊನೆಯ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡಿ ಮಹಿಳೆಯರ ಉತ್ಪನ್ನಗಳಿಗೆ ಬೆಂಬಲ ನೀಡುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Saras Mela 2026 at Karavali Utsav Maidan in Mangalore is drawing large crowds with handicrafts, Channapatna toys, sarees, millet products, and over 30 food stalls. The exhibition-cum-sale by Self Help Group women will conclude on February 28, with organizers urging the public to visit and support rural women entrepreneurs.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror