Advertisement
ಅಂಕಣ

ದೇಶಕಟ್ಟಿದ ಸರದಾರನಿಗೆ ನಮೋ ನಮಃ…. |

Share

ಸರದಾರ ವಲ್ಲಭಭಾಯಿ ಪಟೇಲರ ಜನುಮದಿನ ಅಕ್ಟೋಬರ್‌ 31

Advertisement
Advertisement
Advertisement
Advertisement

1857 ರಲ್ಲಿ ಝಾನ್ಸಿ ಯಲ್ಲಿ ರಾಣಿ ಲಕ್ಷ್ಮೀ ಬಾಯಿ ಆಂಗ್ಲರ ವಿರುದ್ಧದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವೀರಾವೇಷದಿಂದ ಹೋರಾಡಿ ಪ್ರಾಣತೆತ್ತಳು. ಆಗ ಹೊಲದಲ್ಲಿ ಊಳುತ್ತಿದ್ದ ಝವೇರಾಬಾಯಿ ,ಈ ಸುದ್ದಿಯನ್ನು ಕೇಳಿ ನೇಗಿಲನ್ನು ಅಲ್ಲೇ ಕೆಳ ಹಾಕಿ ಕತ್ತಿಯನ್ನು ಹಿಡಿದು ಸೈನ್ಯ ಸೇರಿ ಯುದ್ಧಕ್ಕೆ ಹೊರಟ. ಇಂಗ್ಲೀಷರ ಸೈನ್ಯ ದೊಂದಿಗೆ ಶೌರ್ಯ ಸಾಹಸಗಳೊಂದಿಗೆ ಹೋರಾಡಿದ. ಈ ಝವೇರಾಬಾಯಿಯ ಮಗನೇ ವಲ್ಲಭಭಾಯಿ ಪಟೇಲರು.

Advertisement

ತನ್ನ ತಂದೆಯ ಸ್ವಾತಂತ್ರ್ಯ ಹೋರಾಟದ ಕಥೆಗಳನ್ನು ತಾಯಿ ಲಾಡಬಾಯಿ ವಿವರಿಸುತ್ತಿದ್ದರೆ ಬಾಲಕ ವಲ್ಲಭಭಾಯಿಯ ಮೈ ಜುಂ ಎನ್ನುವಂತಾಗುತ್ತಿತ್ತು. ರಕ್ತ ಕುದಿಯುತ್ತಿತ್ತು…… ಗುಜರಾತಿನ ಪುಟ್ಟ ಹಳ್ಳಿ ಕರಮಸದ. ಅಲ್ಲಿನ ರೈತ ದಂಪತಿ ಝವೇರಾ ಭಾಯಿ ಹಾಗೂ ಲಾಡಬಾಯಿ ದಂಪತಿಗಳ ಐವರು ಮಕ್ಕಳಲ್ಲಿ ನಾಲ್ಕನೇಯವರು ವಲ್ಲಭಭಾಯಿ ಪಟೇಲರು. 1875  ಅಕ್ಟೋಬರ್  31  ರಂದು ಜನಿಸಿದರು.

ಬಾಲ್ಯದಿಂದಲೇ ಬ್ರಿಟಿಷ್ ರ ದಬ್ಬಾಳಿಕೆಗಳನ್ನು ನೋಡುತ್ತಾ ಬೆಳೆದುದರಿಂದ ಸಹಜವಾಗಿ ಸ್ವಾತಂತ್ರ್ಯ ಹೋರಾಟದತ್ತ ಮುಖ ಮಾಡಿದರು.ದೇಶಪ್ರೇಮ ಉಕ್ಕಿ ಹರಿಯುತ್ತಿತ್ತು. ಗಾಂಧಿಯವರೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ವಲ್ಲಭಭಾಯಿ ಪಟೇಲ್ ರವರೂ ಜತೆಯಾದರು. ಗಾಂಧೀಜಿಯವರು ಹಾಗೂ ವಲ್ಲಭಭಾಯಿ ಪಟೇಲರವರಿಬ್ಬರೂ ವಕೀಲಿ ವೃತ್ತಿಯಿಂದ ರಾಜಕೀಯ ಪ್ರವೇಶ ಮಾಡಿದವರು. ಅಂದಿನ ಸನ್ನಿವೇಶಗಳು ಹಾಗಿತ್ತು. ವ್ಯಾಪಾರಕ್ಕೆ ತಕ್ಕಡಿ ಹಿಡಿದು ಕೊಂಡು ಬಂದವರು ದೇಶದ ಆಡಳಿತವನ್ನು ಕೈಗೆತ್ತಿಕೊಂಡರೆ ಭಾರತಾಂಬೆಯಕ್ಕಳು ಸುಮ್ಮನಿರುವುದು ಸಾಧ್ಯವೇ. ನಮ್ಮ ಸಂಪತ್ತುಗಳನ್ನು ಕೊಳ್ಳೆ ಹೊಡೆಯುವುದನ್ನು ನೋಡುತ್ತಾ ಕುಳಿತು ಕೊಳ್ಳುವುದು ಹೇಡಿಗಳಿಂದ ಮಾತ್ರ ಸಾಧ್ಯ ಆ ಸಂದಿಗ್ಧ ಪರಿಸ್ಥಿತಿಯಲ್ಲಿ ಹೋರಾಟಕ್ಕೆ ಧುಮುಕಿದವರು ಪಟೇಲರು.

Advertisement

1982 ರಲ್ಲಿ ಬ್ರಿಟಿಷ್ ಸರ್ಕಾರವು ರೈತಾಪಿ ಜನರ ಮೇಲೆ ಹೆಚ್ಚಿನ ತೆರಿಗೆ ವಿಧಿಸಿತು. ಏನು ಮಾಡುವುದೆಂದರಿಯದೆ ಕಂಗಾಲಾದ ರೈತರು ಪಟೇಲರ ಬಳಿ ತಮ್ಮ ಕಷ್ಟವನ್ನು ಹೇಳಿಕೊಂಡರು. ಆಗ ಪಟೇಲರು ” ಭೂಮಿ ನಮ್ಮದು , ದೇಶ ನಮ್ಮದು, ಎಲ್ಲಿಂದಲೋ ಬಂದು ನಮ್ಮ ಮೇಲೆ ದಬ್ಬಾಳಿಕೆ ಮಾಡುವಷ್ಟು ಪೊಗರೇ” ಎಂದು ತೀವ್ರ ಸ್ವರೂಪದ ಹೋರಾಟಕ್ಕಿಳಿದು ಸಫಲರಾದರು. ಈ ಚಳುವಳಿಯಲ್ಲಿ ‌‌ಯಶಸ್ವಿಯಾದುದನ್ನು ಕಂಡು ಗಾಂಧೀಜಿಯವರು ‘ ಸರದಾರ’ ಎಂಬ ಬಿರುದನ್ನು ಕೊಟ್ಟರು. ಅಂದಿನಿಂದ ‘ಸರದಾರ್ ವಲ್ಲಭಭಾಯಿ ಪಟೇಲ್ ‘ ಎಂಬ ಹೆಸರಿನಿಂದ ಪ್ರಸಿದ್ಧರಾದರು.

ಸ್ವಾತಂತ್ರ್ಯ ಹೋರಾಟದಲ್ಲಿ ಮಾತ್ರವಲ್ಲದೆ ಸ್ವತಂತ್ರ ಭಾರತ ಕಟ್ಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿ ಯಶಸ್ವಿಯಾದವರು ಪಟೇಲರು. ಸ್ವತಂತ್ರವಾದ ಭಾರತದ ಪ್ರಥಮ ಪ್ರಧಾನಿ ಯಾಗುವ ಜನರ ನಿರೀಕ್ಷೆ ಹುಸಿಯಾಯಿತು. ಒಂದು ವೇಳೆ ಪಟೇಲರು ಪ್ರಧಮ ಪ್ರಧಾನ ಮಂತ್ರಿಯಾಗಿರುತ್ತಿದ್ದರೆ……….. ಎಂಬ ಮನದ ಮಾತು ಇಂದಿಗೂ ಮತ್ತೆ ಮತ್ತೆ ಕಾಡುತಿರುವುದು ಸುಳ್ಳಲ್ಲ.
ಉಕ್ಕಿನ ಮನುಷ್ಯನ ಜನುಮದಿನದ ನೆನಪುಗಳು.

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

15 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

15 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

15 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

15 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

15 hours ago