Advertisement
ಅಂಕಣ

ಸತ್ಯಮೇವ ಜಯತೇ

Share
ಸ್ವಾತಂತ್ರ್ಯ ನಮ್ಮ ಜನ್ಮಸಿದ್ಧ ಹಕ್ಕು. ವಾಕ್ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಸಂವಿಧಾನವು ಭಾರತದ ಪ್ರಜೆಗಳಿಗೆ ವಿಶೇಷವಾದ ಹಕ್ಕುಗಳನ್ನು ಕೊಟ್ಟಿದೆ. ಸಮಾನತೆಯ ಹಕ್ಕು, ಸ್ವಾತಂತ್ರ್ಯದ ಹಕ್ಕುಗಳು, ಶೋಷಣೆಯ ವಿರುದ್ಧದ ಹಕ್ಕುಗಳು ಅವುಗಳಲ್ಲಿ ಕೆಲವು. ನಮ್ಮ ದೇಶ , ನಮ್ಮ ನೆಲ ಯಾವತ್ತೂ ನಮಗೆ ಮುಖ್ಯವೇ. ಇಲ್ಲಿನ ಸಂಸ್ಕೃತಿ , ಧರ್ಮ, ಆಚಾರಣೆಗಳು ಎಲ್ಲವೂ ಕೂಡ ಅದರದ್ದೇ ಆದ ಐತಿಹ್ಯವನ್ನು ಹೊಂದಿದೆ. ನಾವು ಮೂಲ ಭಾರತೀಯರು ತಲೆ ಬಾಗ ಬೇಕಾದುದು ಮಾತೃಭೂಮಿ ಹಾಗೂ ಮಾತೆಗೆ ಮಾತ್ರ. ಹೀಗಿರುವಾಗ ದೇಶದ ಬಗ್ಗೆ ಕೀಳಾಗಿ ಮಾತನಾಡುವರನ್ನ,
ದೇಶದ ಸಂಪತ್ತನ್ನು ಲೂಟಿ ಹೊಡೆಯುವವರ ವಿರುದ್ಧ ಮಾತನಾಡಿದರೆ ತಪ್ಪಾಗುತ್ತದೆ.
Advertisement
Advertisement
Advertisement
Advertisement

ನಮ್ಮ ದೇಶದಲ್ಲಿ ಹುಟ್ಟಿ, ಅನ್ನ ನೀರು ಉಂಡು , ಇಲ್ಲಿನ ಶಾಲೆಗಳಲ್ಲೇ ಕಲಿತು, ದೇಶದ ಋಣದಲ್ಲೇ ಬಿದ್ದುಕೊಂಡಿದ್ದು ಭಾರತಕ್ಕೆ ದ್ರೋಹ ಬಗೆಯುತ್ತಿರುವವರ ಮುಖವಾಡವನ್ನು ಕಿತ್ತೊಗೆಯುವುದು ತಪ್ಪಾಗುತ್ತದೆ. ರಿಪಬ್ಲಿಕ್ ಟಿ.ವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಬಂಧನದ ಹಿಂದಿನ ಕತೆಯೂ ಇದುವೆ. ಹೊಗಳು ಭಟ್ಟ ಪತ್ರಿಕೋದ್ಯಮಿಗಳಿಂದ ವಿಭಿನ್ನವಾಗಿರುವ ಅರ್ನಬ್ ನಿಜವಾದ ಜರ್ನಲಿಸ್ಟ್.

Advertisement

ಪತ್ರಕರ್ತರು ನಿಜವಾಗಿಯೂ ಮಾಡಬೇಕಾದದ್ದೇನು? ಸುತ್ತಲಿನ ಪ್ರಪಂಚದಲ್ಲಿ ಏನೇನು ನಡೆಯುತ್ತಿದೆ, ನಿಜವಾಗಿಯೂ ಏನಾಗ ಬೇಕು ಎಂಬುದರ ಕೂಲಂಕುಷ ವಿವರ. ಇದು ಸಮಾಜದ ಕೊನೆಯ ವ್ಯಕ್ತಿಯನ್ನು ತಲುಪುವಂತೆ ಮಾಡುವುದು ಪತ್ರಕರ್ತನ ಕರ್ತವ್ಯ. ಸಮಸ್ಯೆಗಳನ್ನು ತೆರೆದಿಡುವುದು, ಪರಿಹಾರದ ನಿಟ್ಟಿನಲ್ಲಿ ಮಾಡಬಹುದಾದ ಕೆಲಸಗಳೇನು ಎಂಬ ಚರ್ಚೆಗಳಿಗೆ ವೇದಿಕೆಯನ್ನು ಒದಗಿಸುವುದು , ಸಂಬಂದ ಪಟ್ಟವರ ಗಮನಕ್ಕೆ ತರುವುದು. ಇದು ಸದ್ಯದ ಕಮಿಲ ಗ್ರಾಮದ ಹೋರಾಟವಾದರೂ ಸರಿ , ರಾಷ್ಟ್ರಮಟ್ಟದ ಸಮಸ್ಯೆಗಳಾದರೂ ಸರಿ ಹೋರಾಟದಲ್ಲಿ ಪತ್ರಕರ್ತನ ಪ್ರಾಮುಖ್ಯತೆ ಎದ್ದು ಕಾಣುತ್ತದೆ. ಸಮಸ್ಯೆಗಳನ್ನು ಎತ್ತಿ ತೋರಿಸಲು ಅವರೇ ಆಗ ಬೇಕಷ್ಟೇ.

ಆದರೆ ಪಟ್ಟಭದ್ರ ಹಿತಾಸಕ್ತಿಗಳು ಇಂತಹ ನಿಜ ಹೋರಾಟಗಾರರ ಬಾಯಿ ಮುಚ್ಚಿಸುವಲ್ಲಿ ವ್ಯವಸ್ಥಿವಾಗಿ ಕೆಲಸ ಮಾಡುತ್ತವೆ. ಅರ್ನಬ್ ಗೋಸ್ವಾಮಿಯ ಬಂಧನದಲ್ಲೂ ಇಂತಹ ವಿಷಯಗಳೇ ಪ್ರಮುಖ ಪಾತ್ರವಹಿಸಿದ್ದು. ಆದರೆ ಇಂದು ಜನರು ಎಚ್ಚೆತ್ತು ಕೊಂಡಿದ್ದಾರೆ. ದೇಶದ ಒಳಿತು ಯಾರ ಕೈಯಲ್ಲಿದೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ. ಕುರ್ಚಿ ರಾಜಕೀಯದಿಂದ,ಜಾತಿ ರಾಜಕಾರಣದಿಂದ , ರಾಜಕಾರಣಿಗಳು ಹೊರಬರಬೇಕಾಗಿದೆ. ಭಾರತವನ್ನು ಒಡೆದು ಆಳಲು ಪ್ರಯತ್ನಿಸುತ್ತಿರುವ ಶತ್ರುಗಳಿಂದ ದೇಶವನ್ನು ಕಾಪಾಡುವುದು ಇಂದಿನ ನಮ್ಮ ಅನಿವಾರ್ಯತೆ. ದೇಶ ಕಟ್ಟುವ ಕೆಲಸಕ್ಕೆ ನಿರತರಾಗಿರುವ ಎಲ್ಲರಿಗೂ ನೈತಿಕ ಬೆಂಬಲದ ಅಗತ್ಯ ಬಹಳವಿದೆ. ಎಲ್ಲರೂ ತಳ ಮಟ್ಟದಿಂದಲೇ ಒಂದಾಗ ಬೇಕಾಗಿದೆ. ಸತ್ಯಮೇವ ಜಯತೇ..
ವಂದೇ ಮಾತರಂ.

Advertisement

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

19 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

19 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

19 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

19 hours ago