ಅನುಕ್ರಮ

ಸತ್ಯಮೇವ ಜಯತೇ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸ್ವಾತಂತ್ರ್ಯ ನಮ್ಮ ಜನ್ಮಸಿದ್ಧ ಹಕ್ಕು. ವಾಕ್ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಸಂವಿಧಾನವು ಭಾರತದ ಪ್ರಜೆಗಳಿಗೆ ವಿಶೇಷವಾದ ಹಕ್ಕುಗಳನ್ನು ಕೊಟ್ಟಿದೆ. ಸಮಾನತೆಯ ಹಕ್ಕು, ಸ್ವಾತಂತ್ರ್ಯದ ಹಕ್ಕುಗಳು, ಶೋಷಣೆಯ ವಿರುದ್ಧದ ಹಕ್ಕುಗಳು ಅವುಗಳಲ್ಲಿ ಕೆಲವು. ನಮ್ಮ ದೇಶ , ನಮ್ಮ ನೆಲ ಯಾವತ್ತೂ ನಮಗೆ ಮುಖ್ಯವೇ. ಇಲ್ಲಿನ ಸಂಸ್ಕೃತಿ , ಧರ್ಮ, ಆಚಾರಣೆಗಳು ಎಲ್ಲವೂ ಕೂಡ ಅದರದ್ದೇ ಆದ ಐತಿಹ್ಯವನ್ನು ಹೊಂದಿದೆ. ನಾವು ಮೂಲ ಭಾರತೀಯರು ತಲೆ ಬಾಗ ಬೇಕಾದುದು ಮಾತೃಭೂಮಿ ಹಾಗೂ ಮಾತೆಗೆ ಮಾತ್ರ. ಹೀಗಿರುವಾಗ ದೇಶದ ಬಗ್ಗೆ ಕೀಳಾಗಿ ಮಾತನಾಡುವರನ್ನ,
ದೇಶದ ಸಂಪತ್ತನ್ನು ಲೂಟಿ ಹೊಡೆಯುವವರ ವಿರುದ್ಧ ಮಾತನಾಡಿದರೆ ತಪ್ಪಾಗುತ್ತದೆ.
Advertisement
Advertisement

ನಮ್ಮ ದೇಶದಲ್ಲಿ ಹುಟ್ಟಿ, ಅನ್ನ ನೀರು ಉಂಡು , ಇಲ್ಲಿನ ಶಾಲೆಗಳಲ್ಲೇ ಕಲಿತು, ದೇಶದ ಋಣದಲ್ಲೇ ಬಿದ್ದುಕೊಂಡಿದ್ದು ಭಾರತಕ್ಕೆ ದ್ರೋಹ ಬಗೆಯುತ್ತಿರುವವರ ಮುಖವಾಡವನ್ನು ಕಿತ್ತೊಗೆಯುವುದು ತಪ್ಪಾಗುತ್ತದೆ. ರಿಪಬ್ಲಿಕ್ ಟಿ.ವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಬಂಧನದ ಹಿಂದಿನ ಕತೆಯೂ ಇದುವೆ. ಹೊಗಳು ಭಟ್ಟ ಪತ್ರಿಕೋದ್ಯಮಿಗಳಿಂದ ವಿಭಿನ್ನವಾಗಿರುವ ಅರ್ನಬ್ ನಿಜವಾದ ಜರ್ನಲಿಸ್ಟ್.

ಪತ್ರಕರ್ತರು ನಿಜವಾಗಿಯೂ ಮಾಡಬೇಕಾದದ್ದೇನು? ಸುತ್ತಲಿನ ಪ್ರಪಂಚದಲ್ಲಿ ಏನೇನು ನಡೆಯುತ್ತಿದೆ, ನಿಜವಾಗಿಯೂ ಏನಾಗ ಬೇಕು ಎಂಬುದರ ಕೂಲಂಕುಷ ವಿವರ. ಇದು ಸಮಾಜದ ಕೊನೆಯ ವ್ಯಕ್ತಿಯನ್ನು ತಲುಪುವಂತೆ ಮಾಡುವುದು ಪತ್ರಕರ್ತನ ಕರ್ತವ್ಯ. ಸಮಸ್ಯೆಗಳನ್ನು ತೆರೆದಿಡುವುದು, ಪರಿಹಾರದ ನಿಟ್ಟಿನಲ್ಲಿ ಮಾಡಬಹುದಾದ ಕೆಲಸಗಳೇನು ಎಂಬ ಚರ್ಚೆಗಳಿಗೆ ವೇದಿಕೆಯನ್ನು ಒದಗಿಸುವುದು , ಸಂಬಂದ ಪಟ್ಟವರ ಗಮನಕ್ಕೆ ತರುವುದು. ಇದು ಸದ್ಯದ ಕಮಿಲ ಗ್ರಾಮದ ಹೋರಾಟವಾದರೂ ಸರಿ , ರಾಷ್ಟ್ರಮಟ್ಟದ ಸಮಸ್ಯೆಗಳಾದರೂ ಸರಿ ಹೋರಾಟದಲ್ಲಿ ಪತ್ರಕರ್ತನ ಪ್ರಾಮುಖ್ಯತೆ ಎದ್ದು ಕಾಣುತ್ತದೆ. ಸಮಸ್ಯೆಗಳನ್ನು ಎತ್ತಿ ತೋರಿಸಲು ಅವರೇ ಆಗ ಬೇಕಷ್ಟೇ.

ಆದರೆ ಪಟ್ಟಭದ್ರ ಹಿತಾಸಕ್ತಿಗಳು ಇಂತಹ ನಿಜ ಹೋರಾಟಗಾರರ ಬಾಯಿ ಮುಚ್ಚಿಸುವಲ್ಲಿ ವ್ಯವಸ್ಥಿವಾಗಿ ಕೆಲಸ ಮಾಡುತ್ತವೆ. ಅರ್ನಬ್ ಗೋಸ್ವಾಮಿಯ ಬಂಧನದಲ್ಲೂ ಇಂತಹ ವಿಷಯಗಳೇ ಪ್ರಮುಖ ಪಾತ್ರವಹಿಸಿದ್ದು. ಆದರೆ ಇಂದು ಜನರು ಎಚ್ಚೆತ್ತು ಕೊಂಡಿದ್ದಾರೆ. ದೇಶದ ಒಳಿತು ಯಾರ ಕೈಯಲ್ಲಿದೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ. ಕುರ್ಚಿ ರಾಜಕೀಯದಿಂದ,ಜಾತಿ ರಾಜಕಾರಣದಿಂದ , ರಾಜಕಾರಣಿಗಳು ಹೊರಬರಬೇಕಾಗಿದೆ. ಭಾರತವನ್ನು ಒಡೆದು ಆಳಲು ಪ್ರಯತ್ನಿಸುತ್ತಿರುವ ಶತ್ರುಗಳಿಂದ ದೇಶವನ್ನು ಕಾಪಾಡುವುದು ಇಂದಿನ ನಮ್ಮ ಅನಿವಾರ್ಯತೆ. ದೇಶ ಕಟ್ಟುವ ಕೆಲಸಕ್ಕೆ ನಿರತರಾಗಿರುವ ಎಲ್ಲರಿಗೂ ನೈತಿಕ ಬೆಂಬಲದ ಅಗತ್ಯ ಬಹಳವಿದೆ. ಎಲ್ಲರೂ ತಳ ಮಟ್ಟದಿಂದಲೇ ಒಂದಾಗ ಬೇಕಾಗಿದೆ. ಸತ್ಯಮೇವ ಜಯತೇ..
ವಂದೇ ಮಾತರಂ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 hour ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

5 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

5 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

14 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

15 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

15 hours ago