Advertisement
ಅನುಕ್ರಮ

ಸತ್ಯಮೇವ ಜಯತೇ

Share
ಸ್ವಾತಂತ್ರ್ಯ ನಮ್ಮ ಜನ್ಮಸಿದ್ಧ ಹಕ್ಕು. ವಾಕ್ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಸಂವಿಧಾನವು ಭಾರತದ ಪ್ರಜೆಗಳಿಗೆ ವಿಶೇಷವಾದ ಹಕ್ಕುಗಳನ್ನು ಕೊಟ್ಟಿದೆ. ಸಮಾನತೆಯ ಹಕ್ಕು, ಸ್ವಾತಂತ್ರ್ಯದ ಹಕ್ಕುಗಳು, ಶೋಷಣೆಯ ವಿರುದ್ಧದ ಹಕ್ಕುಗಳು ಅವುಗಳಲ್ಲಿ ಕೆಲವು. ನಮ್ಮ ದೇಶ , ನಮ್ಮ ನೆಲ ಯಾವತ್ತೂ ನಮಗೆ ಮುಖ್ಯವೇ. ಇಲ್ಲಿನ ಸಂಸ್ಕೃತಿ , ಧರ್ಮ, ಆಚಾರಣೆಗಳು ಎಲ್ಲವೂ ಕೂಡ ಅದರದ್ದೇ ಆದ ಐತಿಹ್ಯವನ್ನು ಹೊಂದಿದೆ. ನಾವು ಮೂಲ ಭಾರತೀಯರು ತಲೆ ಬಾಗ ಬೇಕಾದುದು ಮಾತೃಭೂಮಿ ಹಾಗೂ ಮಾತೆಗೆ ಮಾತ್ರ. ಹೀಗಿರುವಾಗ ದೇಶದ ಬಗ್ಗೆ ಕೀಳಾಗಿ ಮಾತನಾಡುವರನ್ನ,
ದೇಶದ ಸಂಪತ್ತನ್ನು ಲೂಟಿ ಹೊಡೆಯುವವರ ವಿರುದ್ಧ ಮಾತನಾಡಿದರೆ ತಪ್ಪಾಗುತ್ತದೆ.

ನಮ್ಮ ದೇಶದಲ್ಲಿ ಹುಟ್ಟಿ, ಅನ್ನ ನೀರು ಉಂಡು , ಇಲ್ಲಿನ ಶಾಲೆಗಳಲ್ಲೇ ಕಲಿತು, ದೇಶದ ಋಣದಲ್ಲೇ ಬಿದ್ದುಕೊಂಡಿದ್ದು ಭಾರತಕ್ಕೆ ದ್ರೋಹ ಬಗೆಯುತ್ತಿರುವವರ ಮುಖವಾಡವನ್ನು ಕಿತ್ತೊಗೆಯುವುದು ತಪ್ಪಾಗುತ್ತದೆ. ರಿಪಬ್ಲಿಕ್ ಟಿ.ವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಬಂಧನದ ಹಿಂದಿನ ಕತೆಯೂ ಇದುವೆ. ಹೊಗಳು ಭಟ್ಟ ಪತ್ರಿಕೋದ್ಯಮಿಗಳಿಂದ ವಿಭಿನ್ನವಾಗಿರುವ ಅರ್ನಬ್ ನಿಜವಾದ ಜರ್ನಲಿಸ್ಟ್.

ಪತ್ರಕರ್ತರು ನಿಜವಾಗಿಯೂ ಮಾಡಬೇಕಾದದ್ದೇನು? ಸುತ್ತಲಿನ ಪ್ರಪಂಚದಲ್ಲಿ ಏನೇನು ನಡೆಯುತ್ತಿದೆ, ನಿಜವಾಗಿಯೂ ಏನಾಗ ಬೇಕು ಎಂಬುದರ ಕೂಲಂಕುಷ ವಿವರ. ಇದು ಸಮಾಜದ ಕೊನೆಯ ವ್ಯಕ್ತಿಯನ್ನು ತಲುಪುವಂತೆ ಮಾಡುವುದು ಪತ್ರಕರ್ತನ ಕರ್ತವ್ಯ. ಸಮಸ್ಯೆಗಳನ್ನು ತೆರೆದಿಡುವುದು, ಪರಿಹಾರದ ನಿಟ್ಟಿನಲ್ಲಿ ಮಾಡಬಹುದಾದ ಕೆಲಸಗಳೇನು ಎಂಬ ಚರ್ಚೆಗಳಿಗೆ ವೇದಿಕೆಯನ್ನು ಒದಗಿಸುವುದು , ಸಂಬಂದ ಪಟ್ಟವರ ಗಮನಕ್ಕೆ ತರುವುದು. ಇದು ಸದ್ಯದ ಕಮಿಲ ಗ್ರಾಮದ ಹೋರಾಟವಾದರೂ ಸರಿ , ರಾಷ್ಟ್ರಮಟ್ಟದ ಸಮಸ್ಯೆಗಳಾದರೂ ಸರಿ ಹೋರಾಟದಲ್ಲಿ ಪತ್ರಕರ್ತನ ಪ್ರಾಮುಖ್ಯತೆ ಎದ್ದು ಕಾಣುತ್ತದೆ. ಸಮಸ್ಯೆಗಳನ್ನು ಎತ್ತಿ ತೋರಿಸಲು ಅವರೇ ಆಗ ಬೇಕಷ್ಟೇ.

ಆದರೆ ಪಟ್ಟಭದ್ರ ಹಿತಾಸಕ್ತಿಗಳು ಇಂತಹ ನಿಜ ಹೋರಾಟಗಾರರ ಬಾಯಿ ಮುಚ್ಚಿಸುವಲ್ಲಿ ವ್ಯವಸ್ಥಿವಾಗಿ ಕೆಲಸ ಮಾಡುತ್ತವೆ. ಅರ್ನಬ್ ಗೋಸ್ವಾಮಿಯ ಬಂಧನದಲ್ಲೂ ಇಂತಹ ವಿಷಯಗಳೇ ಪ್ರಮುಖ ಪಾತ್ರವಹಿಸಿದ್ದು. ಆದರೆ ಇಂದು ಜನರು ಎಚ್ಚೆತ್ತು ಕೊಂಡಿದ್ದಾರೆ. ದೇಶದ ಒಳಿತು ಯಾರ ಕೈಯಲ್ಲಿದೆ ಎಂಬುದನ್ನು ಅರ್ಥಮಾಡಿಕೊಳ್ಳುತ್ತಿದ್ದಾರೆ. ಕುರ್ಚಿ ರಾಜಕೀಯದಿಂದ,ಜಾತಿ ರಾಜಕಾರಣದಿಂದ , ರಾಜಕಾರಣಿಗಳು ಹೊರಬರಬೇಕಾಗಿದೆ. ಭಾರತವನ್ನು ಒಡೆದು ಆಳಲು ಪ್ರಯತ್ನಿಸುತ್ತಿರುವ ಶತ್ರುಗಳಿಂದ ದೇಶವನ್ನು ಕಾಪಾಡುವುದು ಇಂದಿನ ನಮ್ಮ ಅನಿವಾರ್ಯತೆ. ದೇಶ ಕಟ್ಟುವ ಕೆಲಸಕ್ಕೆ ನಿರತರಾಗಿರುವ ಎಲ್ಲರಿಗೂ ನೈತಿಕ ಬೆಂಬಲದ ಅಗತ್ಯ ಬಹಳವಿದೆ. ಎಲ್ಲರೂ ತಳ ಮಟ್ಟದಿಂದಲೇ ಒಂದಾಗ ಬೇಕಾಗಿದೆ. ಸತ್ಯಮೇವ ಜಯತೇ..
ವಂದೇ ಮಾತರಂ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

45 minutes ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

3 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

8 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

17 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

17 hours ago