ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್ನಲ್ಲಿ ಡಾ.ಮಹೇಶ್ ಕೆ ಎಸ್ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗುತ್ತಿಗಾರು ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪ್ಪಯ್ಯ, ನೆಲ್ಲೂರು ಕೆಮ್ರಾಜೆ ಗ್ರಾಪಂ ಅಧ್ಯಕ್ಷೆ ಶೀಲಾವತಿ, ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ಯಕ್ಷ ವಿಷ್ಣು ಭಟ್ ಮೂಲೆತೋಟ ಶುಭ ಹಾರೈಸಿದರು. ಹೊನ್ನಡಿ ಕಾಂಪ್ಲೆಕ್ಸ್ ನ ಕೃಷ್ಣ ಭಟ್ ಹೊನ್ನಡಿ ಉಪಸ್ಥಿತರಿದ್ದರು.
ಸತ್ವಂ ಚಿಕಿತ್ಸಾಲಯದ ವೈದ್ಯ ಡಾ.ಮಹೇಶ್ ಕೆ ಎಸ್ ಮಾತನಾಡಿ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಡಾ.ಮಹೇಶ್ ಕೆ ಎಸ್ ಅವರು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಶಂಕರನಾರಾಯಣ ಶರ್ಮ ಹಾಗೂ ನಿವೃತ್ತ ಶಿಕ್ಷಕಿ ರಾಜೇಶ್ವರಿ ಅವರ ಪುತ್ರ. ವ್ಯಾಸಂಗದ ಬಳಿಕ ಹಲವು ಸಮಯಗಳಿಂದ ಮಣಿಪಾಲ, ಉಡುಪಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…