ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್ನಲ್ಲಿ ಡಾ.ಮಹೇಶ್ ಕೆ ಎಸ್ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗುತ್ತಿಗಾರು ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪ್ಪಯ್ಯ, ನೆಲ್ಲೂರು ಕೆಮ್ರಾಜೆ ಗ್ರಾಪಂ ಅಧ್ಯಕ್ಷೆ ಶೀಲಾವತಿ, ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ಯಕ್ಷ ವಿಷ್ಣು ಭಟ್ ಮೂಲೆತೋಟ ಶುಭ ಹಾರೈಸಿದರು. ಹೊನ್ನಡಿ ಕಾಂಪ್ಲೆಕ್ಸ್ ನ ಕೃಷ್ಣ ಭಟ್ ಹೊನ್ನಡಿ ಉಪಸ್ಥಿತರಿದ್ದರು.
ಸತ್ವಂ ಚಿಕಿತ್ಸಾಲಯದ ವೈದ್ಯ ಡಾ.ಮಹೇಶ್ ಕೆ ಎಸ್ ಮಾತನಾಡಿ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಡಾ.ಮಹೇಶ್ ಕೆ ಎಸ್ ಅವರು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಶಂಕರನಾರಾಯಣ ಶರ್ಮ ಹಾಗೂ ನಿವೃತ್ತ ಶಿಕ್ಷಕಿ ರಾಜೇಶ್ವರಿ ಅವರ ಪುತ್ರ. ವ್ಯಾಸಂಗದ ಬಳಿಕ ಹಲವು ಸಮಯಗಳಿಂದ ಮಣಿಪಾಲ, ಉಡುಪಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…