ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್ನಲ್ಲಿ ಡಾ.ಮಹೇಶ್ ಕೆ ಎಸ್ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗುತ್ತಿಗಾರು ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪ್ಪಯ್ಯ, ನೆಲ್ಲೂರು ಕೆಮ್ರಾಜೆ ಗ್ರಾಪಂ ಅಧ್ಯಕ್ಷೆ ಶೀಲಾವತಿ, ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ಯಕ್ಷ ವಿಷ್ಣು ಭಟ್ ಮೂಲೆತೋಟ ಶುಭ ಹಾರೈಸಿದರು. ಹೊನ್ನಡಿ ಕಾಂಪ್ಲೆಕ್ಸ್ ನ ಕೃಷ್ಣ ಭಟ್ ಹೊನ್ನಡಿ ಉಪಸ್ಥಿತರಿದ್ದರು.
ಸತ್ವಂ ಚಿಕಿತ್ಸಾಲಯದ ವೈದ್ಯ ಡಾ.ಮಹೇಶ್ ಕೆ ಎಸ್ ಮಾತನಾಡಿ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಡಾ.ಮಹೇಶ್ ಕೆ ಎಸ್ ಅವರು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಶಂಕರನಾರಾಯಣ ಶರ್ಮ ಹಾಗೂ ನಿವೃತ್ತ ಶಿಕ್ಷಕಿ ರಾಜೇಶ್ವರಿ ಅವರ ಪುತ್ರ. ವ್ಯಾಸಂಗದ ಬಳಿಕ ಹಲವು ಸಮಯಗಳಿಂದ ಮಣಿಪಾಲ, ಉಡುಪಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…