ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್ನಲ್ಲಿ ಡಾ.ಮಹೇಶ್ ಕೆ ಎಸ್ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗುತ್ತಿಗಾರು ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪ್ಪಯ್ಯ, ನೆಲ್ಲೂರು ಕೆಮ್ರಾಜೆ ಗ್ರಾಪಂ ಅಧ್ಯಕ್ಷೆ ಶೀಲಾವತಿ, ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ಯಕ್ಷ ವಿಷ್ಣು ಭಟ್ ಮೂಲೆತೋಟ ಶುಭ ಹಾರೈಸಿದರು. ಹೊನ್ನಡಿ ಕಾಂಪ್ಲೆಕ್ಸ್ ನ ಕೃಷ್ಣ ಭಟ್ ಹೊನ್ನಡಿ ಉಪಸ್ಥಿತರಿದ್ದರು.
ಸತ್ವಂ ಚಿಕಿತ್ಸಾಲಯದ ವೈದ್ಯ ಡಾ.ಮಹೇಶ್ ಕೆ ಎಸ್ ಮಾತನಾಡಿ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಡಾ.ಮಹೇಶ್ ಕೆ ಎಸ್ ಅವರು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಶಂಕರನಾರಾಯಣ ಶರ್ಮ ಹಾಗೂ ನಿವೃತ್ತ ಶಿಕ್ಷಕಿ ರಾಜೇಶ್ವರಿ ಅವರ ಪುತ್ರ. ವ್ಯಾಸಂಗದ ಬಳಿಕ ಹಲವು ಸಮಯಗಳಿಂದ ಮಣಿಪಾಲ, ಉಡುಪಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…