ಸಾತ್ವಿಕ್
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡಾ ಸಾಧನೆ ಮಾಡಬಲ್ಲರು. ಅಂತಹ ಹತ್ತಾರು ಉದಾಹರಣೆಗಳು ಇವೆ. ಇದೀಗ ಇನ್ನೊಂದು ಸಾಧನೆ ಗ್ರಾಮೀಣ ಭಾಗದ ವಿದ್ಯಾರ್ಥಿಯೊಬರಬು ಮಾಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಪದವಿಪೂರ್ವ ವಿಭಾಗದ ವಿದ್ಯಾರ್ಥಿ ಸಾತ್ವಿಕ್ ಜೆಇಇ ಪರೀಕ್ಷೆಯಲ್ಲಿ ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ಕುಮಾರಸ್ವಾಮಿ ವಿದ್ಯಾಲಯದ ಪಿಯುಸಿ ವಿಭಾಗದ ಮೊದಲ ಬ್ಯಾಚ್ನ ವಿದ್ಯಾರ್ಥಿ ಸಾತ್ವಿಕ್ ಜೆಇಇ(ಮೈನ್) ಪರೀಕ್ಷೆಗೆ ಬರೆದಿದ್ದರು. ಈಗ ಅವರು ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ. ಇದಕ್ಕೆ ಕಾರಣವೂ ಇದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ಸಾತ್ವಿಕ್, ಜೆಇಇ ಪರೀಕ್ಷೆಯನ್ನು ಹೆಚ್ಚಿನ ತರಬೇತಿ ಇಲ್ಲದೆ ಬರೆದಿದ್ದಾರೆ. ಆರಂಭದಲ್ಲಿ ಆನ್ ಲೈನ್ ಮೂಲಕ ತರಬೇತಿ ಪಡೆಯುತ್ತಿದ್ದರು. ನಂತರ ಕಾಲೇಜು ಪ್ರಾಂಶುಪಾಲ ಡಾ.ಸಂಕೀರ್ತ್ ಹೆಬ್ಬಾರ್ ಅವರಿಂದ ತರಬೇತಿ ಪಡೆಯುತ್ತಿದ್ದರು.
ಗ್ರಾಮೀಣ ಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಜೆಇಇ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿರುವ ಸಾತ್ವಿಕ್ ಹೀಗೆ ಹೇಳುತ್ತಾರೆ, ಪ್ರಕೃತಿ ಸೌಂದರ್ಯದ ನಡುವೆ ಪ್ರಶಾಂತವಾದ ವಾತಾವರಣದಲ್ಲಿ ಒತ್ತಡ ರಹಿತವಾಗಿ ಓದಲು ಅನುಕೂಲವಾಗಿದೆ.ಇಂತಹ ಅವಕಾಶ ನೀಡಿರುವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಗೆ ಹಾಗೂ ಶಿಕ್ಷಕರಿಗೆ ಆಭಾರಿಯಾಗಿದ್ದೇನೆ. ಶಿಕ್ಷಣಕ್ಕೆ ಆದ್ಯತೆ ಹಾಗೂ ಸಕಾರಾತ್ಮಕ ಅಂಶಗಳನ್ನ ಒಳಗೊಂಡ ಒಳ್ಳೆಯ ವಾತಾವರಣ ಇಲ್ಲಿ ಸೃಷ್ಟಿಯಾಗಿರುವುದು ಕಲಿಯುವುದಕ್ಕೆ ಹೆಚ್ಚು ಸಾಧ್ಯವಾಯಿತು ಎನ್ನುತ್ತಾರೆ.
ಎಸ್ಎಸ್ಎಲ್ಸಿ ಯಲ್ಲೂ ಉತ್ತಮ ಸಾಧನೆ ಮಾಡಿರುವ ಸಾತ್ವಿಕ್ ಈ ಬಾರಿ ಕೂಡಾ ವಿಶೇಷವಾದ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೂಡಾ ವಿದ್ಯಾರ್ಥಿಗಳು ಸಾಧನೆ ಮಾಡಬಹುದು ಎಂದು ಸಾಧಿಸಿದ್ದಾರೆ ಹಾಗೂ ಇತರ ವಿದ್ಯಾರ್ಥಿಗಳಿಗೂ ಮಾದರಿಯಾಗಿದ್ದಾರೆ. ಸಾತ್ವಿಕ್ ಅವರು ಡಾ.ಶಶಿಧರ್ ಹಾಗೂ ಡಾ.ಅನುಪಮ ಅವರ ಪುತ್ರ.
Satvik, student of Kumaraswamy Vidyalaya in KukkeSubrahmanya, scored the best in the JEE exam
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…