Advertisement
MIRROR FOCUS

ಗ್ರಾಮೀಣ ಭಾಗದ ವಿದ್ಯಾರ್ಥಿ ಸಾಧನೆ | ಜೆಇಇ ಪರೀಕ್ಷೆಯಲ್ಲಿ ಶೇ.97 ಅಂಕ ಪಡೆದ ಸಾತ್ವಿಕ್‌ | ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ |

Share

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡಾ ಸಾಧನೆ ಮಾಡಬಲ್ಲರು. ಅಂತಹ ಹತ್ತಾರು ಉದಾಹರಣೆಗಳು ಇವೆ. ಇದೀಗ ಇನ್ನೊಂದು ಸಾಧನೆ ಗ್ರಾಮೀಣ ಭಾಗದ ವಿದ್ಯಾರ್ಥಿಯೊಬರಬು ಮಾಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಪದವಿಪೂರ್ವ ವಿಭಾಗದ ವಿದ್ಯಾರ್ಥಿ ಸಾತ್ವಿಕ್‌ ಜೆಇಇ ಪರೀಕ್ಷೆಯಲ್ಲಿ ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಕುಮಾರಸ್ವಾಮಿ ವಿದ್ಯಾಲಯದ ಪಿಯುಸಿ ವಿಭಾಗದ ಮೊದಲ ಬ್ಯಾಚ್‌ನ ವಿದ್ಯಾರ್ಥಿ ಸಾತ್ವಿಕ್‌ ಜೆಇಇ(ಮೈನ್)‌ ಪರೀಕ್ಷೆಗೆ ಬರೆದಿದ್ದರು. ಈಗ ಅವರು ಶೇ.97.91 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ. ಇದಕ್ಕೆ ಕಾರಣವೂ ಇದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ಸಾತ್ವಿಕ್‌, ಜೆಇಇ ಪರೀಕ್ಷೆಯನ್ನು ಹೆಚ್ಚಿನ ತರಬೇತಿ ಇಲ್ಲದೆ ಬರೆದಿದ್ದಾರೆ. ಆರಂಭದಲ್ಲಿ ಆನ್‌ ಲೈನ್‌ ಮೂಲಕ ತರಬೇತಿ ಪಡೆಯುತ್ತಿದ್ದರು. ನಂತರ ಕಾಲೇಜು ಪ್ರಾಂಶುಪಾಲ ಡಾ.ಸಂಕೀರ್ತ್‌ ಹೆಬ್ಬಾರ್‌ ಅವರಿಂದ ತರಬೇತಿ ಪಡೆಯುತ್ತಿದ್ದರು.

ಸಾತ್ವಿಕ್

ಗ್ರಾಮೀಣ ಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಾಗೂ ಜೆಇಇ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿರುವ ಸಾತ್ವಿಕ್‌ ಹೀಗೆ ಹೇಳುತ್ತಾರೆ, ಪ್ರಕೃತಿ ಸೌಂದರ್ಯದ ನಡುವೆ ಪ್ರಶಾಂತವಾದ ವಾತಾವರಣದಲ್ಲಿ ಒತ್ತಡ ರಹಿತವಾಗಿ ಓದಲು ಅನುಕೂಲವಾಗಿದೆ.ಇಂತಹ ಅವಕಾಶ ನೀಡಿರುವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿಗೆ ಹಾಗೂ ಶಿಕ್ಷಕರಿಗೆ ಆಭಾರಿಯಾಗಿದ್ದೇನೆ. ಶಿಕ್ಷಣಕ್ಕೆ ಆದ್ಯತೆ ಹಾಗೂ ಸಕಾರಾತ್ಮಕ ಅಂಶಗಳನ್ನ ಒಳಗೊಂಡ ಒಳ್ಳೆಯ ವಾತಾವರಣ ಇಲ್ಲಿ ಸೃಷ್ಟಿಯಾಗಿರುವುದು ಕಲಿಯುವುದಕ್ಕೆ ಹೆಚ್ಚು ಸಾಧ್ಯವಾಯಿತು ಎನ್ನುತ್ತಾರೆ.

ಎಸ್‌ಎಸ್‌ಎಲ್‌ಸಿ ಯಲ್ಲೂ ಉತ್ತಮ ಸಾಧನೆ ಮಾಡಿರುವ ಸಾತ್ವಿಕ್‌ ಈ ಬಾರಿ ಕೂಡಾ ವಿಶೇಷವಾದ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೂಡಾ ವಿದ್ಯಾರ್ಥಿಗಳು ಸಾಧನೆ ಮಾಡಬಹುದು ಎಂದು ಸಾಧಿಸಿದ್ದಾರೆ ಹಾಗೂ ಇತರ ವಿದ್ಯಾರ್ಥಿಗಳಿಗೂ ಮಾದರಿಯಾಗಿದ್ದಾರೆ.‌ ಸಾತ್ವಿಕ್‌ ಅವರು ಡಾ.ಶಶಿಧರ್‌ ಹಾಗೂ ಡಾ.ಅನುಪಮ ಅವರ ಪುತ್ರ.

Satvik, student of Kumaraswamy Vidyalaya in KukkeSubrahmanya, scored the best in the JEE exam

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 hour ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

7 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

19 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

19 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago